ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
29-01-26 11:03 pm
Bangalore Correspondent
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
18 ಕೋಟಿ ಮೌಲ್ಯದ 11 ಕೇಜಿ ಚಿನ್ನ ಲೂಟಿ ; ಬೆಂಗಳೂರಿನ...
29-01-26 01:16 pm
ಮೈಸೂರಿನಲ್ಲಿ ಮತ್ತೆ ಡ್ರಗ್ಸ್ ಫ್ಯಾಕ್ಟರಿ ಶಂಕೆಯಲ್ಲಿ...
28-01-26 09:54 pm
ಅಕ್ರಮ ಮರಳು ಗಣಿಗಾರಿಕೆ, ಮಟ್ಕಾ, ಜೂಜು, ಇಸ್ಪೀಟು ದಂ...
27-01-26 09:57 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm