ಬ್ರೇಕಿಂಗ್ ನ್ಯೂಸ್
27-08-20 11:45 am Hassan Reporter ಕ್ರೈಂ
ಹಾಸನ, ಆಗಸ್ಟ್ 27: ನಿರ್ಗತಿಕ ಮಹಿಳೆಯೊಬ್ಬಳನ್ನು ಕೊಂದು ನಂತರ ತನ್ನ ಕಾಮತೃಷೆ ತೀರಿಸಿಕೊಂಡ ಪೈಶಾಚಿಕ ಕೃತ್ಯ ಬೆಳಕಿಗೆ ಬಂದಿದ್ದು ಗಂಭೀರವಾಗಿ ಪರಿಗಣಿಸಿರುವ ಹಾಸನ ಜಿಲ್ಲಾ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.
ಸೋಮವಾರ ತಡರಾತ್ರಿ ಮಹಿಳೆ ಭಿಕ್ಷಾಟನೆಯ ಬಳಿಕ ರಾತ್ರಿ 11 ಗಂಟೆ ವೇಳೆಗೆ ಎನ್.ಆರ್. ವೃತ್ತದ ಕನ್ನಿಕಾ ಪರಮೇಶ್ವರಿ ಬ್ಯಾಂಕ್ ಎದುರು ಮಲಗಲು ಅಣಿಯಾಗುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದಿದ್ದ ನೀಲಿ ಜೀನ್ಸ್ ಪ್ಯಾಂಟ್ ಧಾರಿ ಕೀಚಕ, ತನ್ನ ಕಾಮತೃಷೆ ತೀರಿಸಿಕೊಳ್ಳಲು ಬಲವಂತ ಮಾಡುತ್ತಾನೆ. ಇದಕ್ಕೆ ಮಹಿಳೆ ನಿರಾಕರಿಸಿದಾಗ ಅಲ್ಲಿಂದ ತೆರಳುವ ಪಾಪಿ ಯುವಕ, ಮಹಿಳೆ ನಿದ್ದೆಗೆ ಜಾರುವವರೆಗೂ ಬೇರೆಡೆ ಹೊಂಚು ಹಾಕಿದ್ದಾನೆ. ಮಹಿಳೆ ಮಲಗಿದ್ದನ್ನು ಖಾತ್ರಿ ಪಡಿಸಿಕೊಂಡ ದುರುಳ, ಬೃಹತ್ ಗಾತ್ರದ ಹಾಲೋಬ್ರಿಕ್ಸ್ ಇಟ್ಟಿಗೆಯನ್ನು ಮಲಗಿದ್ದ ಮಹಿಳೆಯ ತಲೆಗೆ ಎತ್ತಿ ಹಾಕುತ್ತಾನೆ. ನಂತರ ಆಕೆ ಸತ್ತಳೆಂದು ದೃಢವಾದ ಬಳಿಕ ಸತ್ತ ಹೆಣದ ಜೊತೆ ಮೃಗೀಯ ರೀತಿ ವರ್ತಿಸಿ ತನ್ನ ಕಾಮತೃಷೆ ತೀರಿಸಿಕೊಳ್ಳುತ್ತಾನೆ. ಈ ಎಲ್ಲಾ ಅಮಾನವೀಯ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ವಿಕೃತ ಕಾಮಿ ಉಮೇಶ್ ರೆಡ್ಡಿಯ ಹೀನ ಕೃತ್ಯವನ್ನು ನೆನಪಿಸುವ ರೀತಿಯ ಹಂತಕನ ಕರಾಳ ಕೃತ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಇಡೀ ಮನುಕುಲವನ್ನೇ ತಲೆ ತಗ್ಗಿಸುವಂತೆ ಮಾಡಿದೆ. ಅಲ್ಲದೆ ಸಾರ್ವಜನಿಕ ವಲಯದಲ್ಲಿ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಆತನನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂಬ ಒತ್ತಾಯ ಕೇಳಿಬಂದಿದೆ. ಕೃತ್ಯದ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಸಿಸಿಟಿವಿ ಆಧರಿಸಿ ಆರೋಪಿ ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿದ್ದು, ಆದಷ್ಟು ಬೇಗ ಆರೋಪಿಯನ್ನು ಬಂಧಿಸಿ ಕ್ರಮಕೈಗೊಳ್ಳಲಾಗುವುದು ಎಂದು ಹಾಸನ ಎಸ್ಪಿ ಶ್ರೀನಿವಾಸ್ ಗೌಡ ಭರವಸೆ ನೀಡಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm