ಬ್ರೇಕಿಂಗ್ ನ್ಯೂಸ್
16-05-21 05:25 pm Mangaluru Correspondent ಕ್ರೈಂ
ಉಪ್ಪಿನಂಗಡಿ, ಮೇ 16: ವಿವಾಹಿತ ಮಾನಸಿಕ ಅಸ್ವಸ್ಥೆಯೋರ್ವರ ಮೇಲೆ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಪ್ರಕರಣ 34ನೇ ನೆಕ್ಕಿಲಾಡಿಯಲ್ಲಿ ನಡೆದಿದ್ದು, ಈ ಬಗ್ಗೆ ಆಕೆಯ ತಾಯಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.
ದರ್ಬೆ ನಿವಾಸಿ ಸುರೇಶ್ ಪ್ರಭು ಆರೋಪಿ ಎಂದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ. ಮಾನಸಿಕ ಅಸ್ವಸ್ಥೆ ಹಾಗು ಆಕೆಯ ತಾಯಿ ಮೂಲತಃ ಪುತ್ತೂರು ತಾಲೂಕಿನ ನರಿಮೊಗರು ನಿವಾಸಿಗಳಾಗಿದ್ದು, ನೆಕ್ಕಿಲಾಡಿಯ ಬಳಿ ಬಾಡಿಗೆ ಮನೆಯಲ್ಲಿ ಕಳೆದ ಒಂದು ವರ್ಷದಿಂದ ವಾಸ್ತವ್ಯವಿದ್ದರು. ಇವರ 44ರ ಹರೆಯದ ಮಗಳು ಮಾನಸಿಕ ಅಸ್ವಸ್ಥೆಯಾಗಿದ್ದು, ಅವರ ಪತಿ ಗುಜರಾತ್ನಲ್ಲಿದ್ದಾರೆ. ಕಳೆದ 10 ತಿಂಗಳ ಹಿಂದೆ ಪತಿ ಗುಜರಾತ್ಗೆ ತೆರಳಿದ್ದರು.
ಕಳೆದ ಮೇ 12ರಂದು ಇವರ ಮನೆಗೆ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಭೇಟಿ ನೀಡಿದ್ದು, ಈ ಸಂದರ್ಭ ಸಂಶಯ ಬಂದು ಮಹಿಳೆಯನ್ನು ಸ್ಕ್ಯಾನಿಂಗ್ ಮಾಡಿಸಲು ತಿಳಿಸಿದಾಗ ಈಕೆ ಏಳು ತಿಂಗಳ ಗರ್ಭಿಣಿಯೆಂದು ದೃಢವಾಗಿದೆ. ಬಳಿಕ ಈಕೆಯ ತಾಯಿ ಈ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ತನ್ನ ಮಗಳ ಮೇಲೆ ದರ್ಬೆಯ ಸುರೇಶ್ ಪ್ರಭು ಎಂಬಾತ ಅತ್ಯಾಚಾರ ನಡೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ್ದಾನೆ ಎಂದು ದೂರಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
A mentally challenged woman has been allegedly raped and made pregnant by a man in Uppinangady, Mangalore, A case has been filed and the search is on for the accused Suresh Prabhu.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm