ಬ್ರೇಕಿಂಗ್ ನ್ಯೂಸ್
21-05-21 11:10 am Udupi Correspondent ಕ್ರೈಂ
Photo credits : Representative Image
ಕಾರ್ಕಳ, ಮೇ 21: ವ್ಯಕ್ತಿಯೊಬ್ಬರು ತನ್ನ ಮನೆಯ ವೆರಾಂಡಾದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಎರಡು ದಿನಗಳ ಬಳಿಕ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾರ್ಕಳದ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿರ್ಲಾಲು ಹಾದಿಯಂಗಡಿ ನಿವಾಸಿ ಆನಂದ್ ಶೇರ್ವೆಗಾರ್ (63) ಮೃತ ವ್ಯಕ್ತಿಯಾಗಿದ್ದು, ಮೇ 19ರಂದು ರಾತ್ರಿ ಕೊಲೆಯಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆನಂದ್ ಶೇರ್ವೆಗಾರ್ ತನ್ನ ಮಕ್ಕಳು ಮತ್ತು ಪತ್ನಿಯಿಂದ ಬೇರೆಯಾಗಿದ್ದು, ತನಗೆ ಸೇರಿದಗದ ನಾಲ್ಕು ಎಕ್ರೆ ಜಾಗವನ್ನು ಬೆಂಗಳೂರಿನಲ್ಲಿರುವ ಗಣೇಶ್ ರಾವ್ ಮತ್ತು ಮೂವರಿಗೆ ಮಾರಾಟ ಮಾಡಿದ್ದಾರೆ.
ಹಾಗಿದ್ದರೂ, ಜಾಗ ಖರೀದಿಸಿದ ವ್ಯಕ್ತಿಗಳ ಅನುಮತಿ ಪಡೆದು ಅದೇ ಜಾಗದ ಮೂಲೆಯಲ್ಲಿ ಅವರ ಸಂಬಂಧಿಕರ ಮನೆಯ ಪಕ್ಕದಲ್ಲಿ ಸಣ್ಣ ಮನೆ ಮಾಡಿಕೊಂಡು ಒಬ್ಬಂಟಿಯಾಗಿ ನೆಲೆಸಿದ್ದರು. ಒಬ್ಬಂಟಿಯಾಗಿದ್ದ ಆನಂದ್ ಅವರಿಗೆ ದೀನಸಿ ಸಾಮಗ್ರಿ ತಂದುಕೊಡುವುದು ಮತ್ತು ಇತರ ಕೆಲಸಗಳನ್ನು ಮಾಡಿಕೊಡುವುದಕ್ಕಾಗಿ ಅವರ ಅಕ್ಕನ ಮಗ ಹರೀಶ್ ಎಂಬಾತ ಬರುತ್ತಿದ್ದ. ಕೆಲವೊಮ್ಮೆ ಇಬ್ಬರೂ ಮನೆಯಲ್ಲಿ ಕುಳಿತು ಕುಡಿಯುವ ಚಟವನ್ನೂ ಬೆಳೆಸಿಕೊಂಡಿದ್ದರು ಎನ್ನಲಾಗಿದೆ.
ಮೊನ್ನೆ ರಾತ್ರಿಯೂ ಹರೀಶ್ ಮನೆಗೆ ಬಂದಿದ್ದು, ಸಂಜೆ ಹೊತ್ತಿಗೆ ಕೆಲಸ ಮುಗಿಸಿ ತೆರಳಿದ್ದ. ರಾತ್ರಿ ವೇಳೆಗೆ ಮತ್ತೆ ಬಂದಿದ್ದು, ಈ ಸಂದರ್ಭದಲ್ಲಿ ಏನೋ ಜಗಳ ಆಗಿರಬೇಕೆಂದು ಸ್ಥಳೀಯರು ಸಂಶಯಿಸಿದ್ದಾರೆ. ಇದರ ಪರಿಣಾಮ ಕೊಲೆ ಆಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The mortal remains of Shirlalu Hadiangadi Anand Shervegar (63) were found on the verandah of the house, where he used to reside alone, on the late-night of May 19. It is suspected that he is murdered.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm