ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm