ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
30-07-26 09:27 pm
HK News Staffer
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
ಸಂಪುಟ ವಿಸ್ತರಣೆ ಫಿಕ್ಸ್ ಆಗುತ್ತಿದ್ದಂತೆ ಹೈಕಮಾಂಡ್...
28-07-26 08:12 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
30-07-26 09:24 pm
HK News Staffer
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm
ಪರಿಷತ್ ಸ್ಥಾನ ಕೊಡಿಸುವುದಾಗಿ ಹೇಳಿ ಒಂದೂವರೆ ಕೋಟಿ ಪ...
30-07-26 12:18 pm
ಮಂಗಳೂರು ಪೊಲೀಸರಿಂದ 82 ಕೋಟಿ ರೂ. ಮೌಲ್ಯದ ಡ್ರಗ್ಸ್...
29-07-26 10:45 pm