ಬ್ರೇಕಿಂಗ್ ನ್ಯೂಸ್
28-08-20 02:37 pm Headline Karnataka News Network ಕ್ರೈಂ
ಬೆಂಗಳೂರು, ಆಗಸ್ಟ್ 28: ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ 'ಜಮೀನು ಖರೀದಿ' ಯೋಜನೆ ಅವ್ಯವಹಾರ ಆರೋಪ ಸಂಬಂಧ ತನಿಖೆ ಮುಂದುವರಿಸಿರುವ ಎಸಿಬಿ, ಮೂವರನ್ನು ಬಂಧಿಸಿ ಒಟ್ಟು 82 ಲಕ್ಷ ರೂ. ನಗದು ಜಪ್ತಿ ಮಾಡಿದ್ದಾರೆ.
ಇಲ್ಲಿನ ವಸಂತ ನಗರದಲ್ಲಿರುವ ನಿಗಮದ ಕಚೇರಿಗೆ ಗುರುವಾರ ಸಂಜೆ ವೇಳೆ ಹಣ ಬರುವ ಖಚಿತ ಮಾಹಿತಿ ಆಧರಿಸಿ ಈ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಶುಕ್ರವಾರವೂ ಶೋಧ ಕಾರ್ಯ ಮುಂದುವರಿಸಿದ್ದರು.
ಈ ಪ್ರಕರಣ ಸಂಬಂಧ ಮಂಡಳಿಯ ಪ್ರಧಾನ ವ್ಯವಸ್ಥಾಪಕ ನಾಗೇಶ್, ವ್ಯವಸ್ಥಾಪಕ ಸುಬ್ಬಯ್ಯ, ಸಹಾಯಕ ಪ್ರಧಾನ ವ್ಯವಸ್ಥಾಪಕಿ ಮಂಜುಳಾ ಎಂಬವರನ್ನು ಬಂಧಿಸಲಾಗಿದೆ ಎಂದು ಎಸಿಬಿ ತಿಳಿಸಿದೆ.
ಆರೋಪಿ ನಾಗೇಶ್ ನಿವಾಸದ ಮೇಲೆ ದಾಳಿ ನಡೆಸಿದಾಗ 32.5 ಲಕ್ಷ ರೂ.ಪತ್ತೆಯಾಗಿದೆ. ಅದೇ ರೀತಿಯಲ್ಲಿ, ಸುಬ್ಬಯ್ಯ ಮನೆಯಲ್ಲಿಯೂ 27.5 ಲಕ್ಷ ರೂ. ಪತ್ತೆಯಾಗಿದ್ದು, ಒಟ್ಟಾರೆ ಈ ಪ್ರಕರಣದಲ್ಲಿ 82 ಲಕ್ಷ ರೂ. ನಗದು ಜಪ್ತಿ ಮಾಡಲಾಗಿದೆ ಎಂದು ಎಸಿಬಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಆರೋಪ ?
ಸರಕಾರದಡಿ ಫಲವತ್ತಾದ, ಕೃಷಿಗೆ ಯೋಗ್ಯವಾಗಿರುವ ಭೂಮಿ ಖರೀದಿಸಿದ ಬಳಿಕ ಅದನ್ನು ಆರ್ಥಿಕವಾಗಿ ಹಿಂದುಳಿದ ಪರಿಶಿಷ್ಟ ಪಂಗಡದ ಭೂರಹಿತ ಫಲಾನುಭವಿಗಳಿಗೆ ಮಂಜೂರು ಮಾಡುವ ಯೋಜನೆ ಇದಾಗಿದೆ.
ಆದರೆ ಕೆಲ ಅಧಿಕಾರಿಗಳು, ಕಳಪೆಯಾಗಿರುವ ಭೂಮಿ ಅನ್ನು ಮಧ್ಯವರ್ತಿಗಳ ಮೂಲಕ ಕೃಷಿಕರಿಂದ ಖರೀದಿಸುತ್ತಾರೆ. ನಿಗದಿಯಂತೆ ಹೆಚ್ಚಿನ ಮೊತ್ತವನ್ನು ಮಧ್ಯವರ್ತಿಗಳಿಗೆ ಮಂಜೂರು ಮಾಡಿಸುತ್ತಾರೆ. ಬಳಿಕ, ಮಧ್ಯವರ್ತಿಗಳು ಮತ್ತು ಅಧಿಕಾರಿಗಳು ಸೇರಿ ಹೆಚ್ಚುವರಿ ಹಣವನ್ನು ಹಂಚಿಕೆ ಮಾಡಿಕೊಳ್ಳುತ್ತಾರೆ ಎನ್ನುವ ಆರೋಪಗಳು ಕೇಳಿಬಂದಿವೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am