ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm