ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm