ಬ್ರೇಕಿಂಗ್ ನ್ಯೂಸ್
26-05-21 01:50 pm Headline Karnataka News Network ಕ್ರೈಂ
Photo credits : Representative Image
ಬಾಗಲಕೋಟೆ, ಮೇ 26 : ಮಕ್ಕಳು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಕನಸು ಕಟ್ಟಿರುತ್ತಾರೆ. ಆದರೆ ಕಂಡ ಕನಸು ಕನಸಾಗಿ ಉಳಿಯುವುದಕ್ಕೆ ಮುಖ್ಯ ಕಾರಣ ಪೋಷಕರೇ ಆಗಿರುತ್ತಾರೆ. ಬಾಲ್ಯ ವಿವಾಹದಂತಹ ಕೆಟ್ಟ ಪದ್ಧತಿಯಲ್ಲಿ ಮಕ್ಕಳನ್ನು ಸಿಲುಕಿ ಅವರ ಭವಿಷ್ಯವನ್ನೇ ಹಾಳುಮಾಡುತ್ತಾರೆ. ಈಗಲೂ ರಾಜ್ಯದ ಹಲವು ಜನರಿಗೆ ಅರಿವಿಲ್ಲ. ಬಾಲ್ಯ ವಿವಾಹದಿಂದ ಮಕ್ಕಳ ಮೇಲಾಗುವ ಪರಿಣಾಮ ಇನ್ನು ತಿಳಿದಿಲ್ಲ. ಈ ಬಗ್ಗೆ ಎಷ್ಟು ಅರಿವು ಮೂಡಿಸಿದರೂ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಆದರೆ ಅಧಿಕಾರಿಗಳು ಸರಿಯಾದ ಸಮಯಕ್ಕೆ ಹೋಗಿ ವಿವಾಹಗಳನ್ನು ತಡೆದಿದ್ದಾರೆ.

ಬಾಗಲಕೋಟೆಯಲ್ಲಿ ಲಾಕ್ಡೌನ್ ನಡುವೆ ಬಾಲ್ಯ ವಿವಾಹ ನಿಗದಿಯಾಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಏಪ್ರಿಲ್, ಮೇನಲ್ಲಿ ಸುಮಾರು 35 ಬಾಲ್ಯ ವಿವಾಹಗಳು ನಿಗದಿಯಾಗಿತ್ತು. ಈ ಪೈಕಿ 28 ಬಾಲ್ಯ ವಿವಾಹಗಳನ್ನು ಅಧಿಕಾರಿಗಳು ತಡೆದಿದ್ದಾರೆ. ಅದಾಗ್ಯೂ 7 ಬಾಲ್ಯ ವಿವಾಹಗಳು ನಡೆದಿವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಉಪನಿರ್ದೇಶಕ ಅಶೋಕ ಬಸವಣ್ಣವರ ಮಾಹಿತಿ ನೀಡಿದ್ದಾರೆ. ಏಪ್ರಿಲ್, ಮೇ ತಿಂಗಳು ನಡೆದ 7 ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.

ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ
ಕಳೆದ ವರ್ಷವೂ ಜಿಲ್ಲೆಯಲ್ಲಿ ನೂರಕ್ಕೂ ಅಧಿಕ ಬಾಲ್ಯ ವಿವಾಹಕ್ಕೆ ತಯಾರಿ ನಡೆದಿತ್ತು. 113 ಬಾಲ್ಯ ವಿವಾಹಗಳ ಬಗ್ಗೆ ಇಲಾಖೆ ಗಮನಕ್ಕೆ ಮಾಹಿತಿ ಬಂದಿತ್ತು. ಈ ಪೈಕಿ 95 ಬಾಲ್ಯ ವಿವಾಹಗಳನ್ನು ಜಿಲ್ಲಾಡಳಿತ ತಡೆದಿತ್ತು. ಅದಾಗ್ಯೂ ಸುಮಾರು 18 ಬಾಲ್ಯ ವಿವಾಹ ನಡೆದು ಹೋಗಿದೆ. ಈ ಪೈಕಿ ಪ್ರಕರಣ ಮಾತ್ರ ದಾಖಲಾಗಿದ್ದು, ಉಳಿದ ಎಂಟು ಪ್ರಕರಣ ದಾಖಲಾಗಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ.
28 Child Marriages in the Bagalkot district were prevented by officials during this lockdown.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm