ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 05:26 pm
Mangalore Correspondent
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm