ಬ್ರೇಕಿಂಗ್ ನ್ಯೂಸ್
30-05-21 04:09 pm Mangaluru Correspondent ಕ್ರೈಂ
ಸುಳ್ಯ, ಮೇ 30: ಜುವೆಲ್ಲರಿ ಕಳವು ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬಂಧಿಸಿದ್ದ ಆರೋಪಿಯೊಬ್ಬ ಚಿನ್ನದ ಉಂಗುರಗಳನ್ನೇ ನುಂಗಿರುವುದು ಬೆಳಕಿಗೆ ಬಂದಿದೆ.
ಸುಳ್ಯದ ಜುವೆಲ್ಲರಿಯಲ್ಲಿ ಚಿನ್ನಾಭರಣ ಕಳವುಗೈದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಮೇ 28 ರಂದು ಬಂಧಿಸಿದ್ದರು. ಆರೋಪಿಗಳ ಪೈಕಿ ತ್ರಿಶೂರ್ ಜಿಲ್ಲೆಯ ಮೂಲದ ಶಿಬು ಎಂಬಾತ ನಿನ್ನೆ ರಾತ್ರಿ 9 ಗಂಟೆಗೆ ತೀವ್ರ ಹೊಟ್ಟೆ ನೋವಿಗೆ ಒಳಗಾಗಿದ್ದು ಕೂಡಲೇ ಪೊಲೀಸರು ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ನಡೆಸಿ ಪರೀಕ್ಷೆಗೆ ಒಳಪಡಿಸಿದಾಗ ಹೊಟ್ಟೆಯಲ್ಲಿ ಚಿನ್ನದ ಉಂಗುರ ಇರುವುದು ಪತ್ತೆಯಾಗಿದೆ. ಇಂದು ಬೆಳಗ್ಗೆ ಹೊಟ್ಟೆಯಿಂದ ಹಲವಾರು ಉಂಗುರಗಳನ್ನು ಹೊರಬಂದಿದ್ದು 35 ಗ್ರಾಮ್ ಚಿನ್ನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಳಿಕ ಶಿಬುವನ್ನು ವಿಚಾರಣೆ ನಡೆಸಿದಾಗ ಪೊಲೀಸರ ಕೈಗೆ ಸಿಕ್ಕಿಬೀಳುವುದನ್ನು ತಪ್ಪಿಸಲೆಂದು ಚಿನ್ನದ ಉಂಗುರಗಳನ್ನು ಐಸ್ ಕ್ರೀಂ ಜೊತೆಗೆ ನುಂಗಿದ್ದಾಗಿ ಒಪ್ಪಿಕೊಂಡಿದ್ದಾನೆ.
ಆರೋಪಿ ಆರೋಗ್ಯವಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸುಳ್ಯ ಪೇಟೆಯಲ್ಲಿರುವ ಮೋಹನ್ ಜುವೆಲ್ಲರಿಯಿಂದ ಕಳೆದ ಮಾರ್ಚ್ 31 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಕಳವುಗೈದಿದ್ದರು. ತನಿಖೆ ನಡೆಸಿದ ಪೊಲೀಸರು ಕೇರಳದ ಕಣ್ಣೂರು ಜಿಲ್ಲೆಯ ಮಹಮ್ಮದ್ ಬಶೀರ್ ಮತ್ತು ತ್ರಿಶೂರಿನ ಶಿಬುವನ್ನು ಬಂಧಿಸಿದ್ದರು.
READ: ಸುಳ್ಯ ; ಜುವೆಲ್ಲರಿಯಿಂದ ಚಿನ್ನಾಭರಣ ದೋಚಿದ್ದ ಅಂತಾರಾಜ್ಯ ಕಳ್ಳರ ಸೆರೆ
Sullia property Gold theft case accused swallows 34 grams Gold to hide from DK Police seized.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm