ಬ್ರೇಕಿಂಗ್ ನ್ಯೂಸ್
02-06-21 12:29 pm Bangalore Correspondent ಕ್ರೈಂ
ಬೆಂಗಳೂರು, ಜೂ. 02: ಬಾಂಗ್ಲಾದೇಶಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯ ಕಾಲಿಗೆ ಗುಂಡು ಹೊಡೆದು ಬಂಧಿಸಿದ್ದಾರೆ. ಈ ಮೂಲಕ ಒಂದೇ ಪ್ರಕರಣದಲ್ಲಿ ಎರಡು ಬಾರಿ ಶೂಟೌಟ್ ಮಾಡಿ ಮೂವರ ಕಾಲಿಗೆ ಗುಂಡು ಹಾರಿಸಿ ವಿಕೃತ ಕಾಮುಕರಿಗೆ ರಾಮಮೂರ್ತಿನಗರ ಪೊಲೀಸರು ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಬಾಂಗ್ಲಾ ಮೂಲದ ಶೂಬಜ್ ಗುಂಡೇಟು ತಿಂದ ಆರೋಪಿ. ಯುವತಿಯ ಗುಪ್ತಾಂಗಕ್ಕೆ ಕಾಲಿನಲ್ಲಿ ಒದ್ದು ಹಲ್ಲೆ ಮಾಡಿದ್ದ. ವಿಡಿಯೋ ವೈರಲ್ ಆಗಿತ್ತು. ಪ್ರಕರಣ ಬೆಳಕಿಗೆ ಬಂದ ನಂತರ ರಾಂಪುರ ಸಮೀಪ ತಲೆ ಮರೆಸಿಕೊಂಡಿದ್ದ ಶೂಬಜ್ನನ್ನು ಬಂಧಿಸಲು ರಾಮಮೂರ್ತಿನಗರ ಪೊಲೀಸರು ತೆರಳಿದ್ದಾರೆ. ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಬಟನ್ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಈ ವೇಳೆ ರಾಮಮೂರ್ತಿನಗರ ಪಿಎಸ್ಐ ಶಿವರಾಜ್ ನಿಂದ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಆ ಬಳಿಕ ಚಾಕುವಿನಿಂದ ಹಲ್ಲೆ ಮಾಡಲು ಯತ್ನಿಸಿದ್ದ ಆರೋಪಿ ಶೂಬಜ್ ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆಯಲಾಗಿದೆ. ಈ ವೇಳೆ ಪಿಎಸ್ಐ ಶಿವರಾಜ್ ಪೊಲೀಸ್ ಸಿಬ್ಬಂದಿ ದೇವೇಂದ್ರ ಸಿಂಗ್ ಅವರಿಗೆ ಸಣ್ಣ ಗಾಯವಾಗಿದೆ.


ಬಂಧಿತರ ಸಂಖ್ಯೆ ಹತ್ತಕ್ಕೆ ಏರಿಕೆ: ಬಾಂಗ್ಲಾದೇಶಿ ಮೂಲದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಈ ಮೂಲಕ ಬಂಧಿತರ ಸಂಖ್ಯೆ ಹತ್ತಕ್ಕೆ ಏರಿದೆ. ಸಂತ್ರಸ್ತ ಯುವತಿ, ಬಂಧಿತ ಆರೋಪಿಗಳೆಲ್ಲರೂ ಬಾಂಗ್ಲಾದೇಶಿಯರೇ. ಮಸಾಜ್ ಪಾರ್ಲರ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದರು.
ಹಣಕಾಸಿನ ವಿಚಾರವಾಗಿ ಜಗಳ ತೆಗೆದು ಮಸಾಜ್ ಪಾರ್ಲರ್ ನಡೆಸುತ್ತಿದ್ದ ಯುವತಿಯನ್ನು ಬೆಂಗಳೂರಿಗೆ ಕರೆಸಿಕೊಂಡು ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಮಿಗಿಲಾಗಿ ಯುವತಿ ಜತೆ ವಿಕೃತವಾಗಿ ನಡೆದುಕೊಂಡು ದೌರ್ಜನ್ಯ ಎಸಗಿದ್ದರು. ಈ ಕುರಿತ ವಿಡಿಯೋ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆದ ಬಳಿಕ ರಾಮಮೂರ್ತಿನಗರ ಪೊಲೀಸರು ಪ್ರಕರಣವನ್ನು ಪತ್ತೆ ಮಾಡಿದ್ದರು.
ಬಾಂಗ್ಲಾ ಮತಾಂಧರಿಂದ ಬೆಂಗಳೂರಿನಲ್ಲಿ ಮೃಗೀಯ ಕೃತ್ಯ ; ಚಿತ್ರಹಿಂಸೆ ವಿಡಿಯೋ ಹಿಂದಿತ್ತು ಕರಾಳ ವೇಶ್ಯಾವಾಟಿಕೆ ದಂಧೆ !
ಬೆಂಗಳೂರು ಅತ್ಯಾಚಾರ ಕೇಸ್ ; ಸಂತ್ರಸ್ತ ಯುವತಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲು ಸಿದ್ಧತೆ
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm