ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.


ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.





ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.



ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm