ಬ್ರೇಕಿಂಗ್ ನ್ಯೂಸ್
02-06-21 03:22 pm Mangalore Correspondent ಕ್ರೈಂ
ಮಂಗಳೂರು, ಜೂನ್ 2: 20 ವರ್ಷದ ಹುಡುಗಿಯನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸಿದ್ದಲ್ಲದೆ, ರೌಡಿಗಳನ್ನು ಕಟ್ಟಿಕೊಂಡು ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದ್ದು, ಪ್ರಕರಣ ಸಂಬಂಧಿಸಿ ಕಂಕನಾಡಿ ನಗರ ಠಾಣೆ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಮಂಗಳೂರು ನಗರದ ಶಕ್ತಿನಗರದ ಬಳಿಯ ಪ್ರೀತಿ ನಗರದ ಯುವತಿಯನ್ನು ಹೇಮಂತ್ ಎಂಬಾತ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೋಗುತ್ತಿದ್ದು, ಇದನ್ನು ಅರಿತ ಆಕೆಯ ಸೋದರರು ಹೇಮಂತನಿಗೆ ಫೋನ್ ಮಾಡಿ ಬೆದರಿಕೆ ಹಾಕಿದ್ದರು. ತಂಗಿಯ ವಿಚಾರಕ್ಕೆ ಬರದೆ ದೂರ ಇರುವಂತೆ ಹೇಳಿದ್ದರು. ಇದರಿಂದ ಸಿಟ್ಟಿಗೆದ್ದ ಹೇಮಂತ್, ಮೇ 30ರಂದು ರಾತ್ರಿ ಎಂಟು ಗಂಟೆಗೆ ಏಳೆಂಟು ಮಂದಿ ರೌಡಿಗಳೊಂದಿಗೆ ಯುವತಿಯ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ.
ಈ ಸಂದರ್ಭ ಯುವತಿಯ ಸೋದರರು ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮನೆಯಲ್ಲಿದ್ದ ತಾಯಿಯನ್ನು ಬೈದಾಡಿದ್ದಲ್ಲದೆ, ನಿನ್ನ ಮಕ್ಕಳನ್ನು ಜೀವ ಸಹಿತ ಬಿಡುವುದಿಲ್ಲ ಎನ್ನುತ್ತಾ ತಲವಾರು ಮತ್ತು ರಾಡಿನಿಂದ ಮನೆಯಲ್ಲಿದ್ದ ಟಿವಿ, ಸೋಫಾ, ಮಿಕ್ಸಿಗಳಿಗೆ ಹಾನಿ ಮಾಡಿದ್ದಾರೆ. ಬಳಿಕ ತಾಯಿ ಮನೆಯ ಹಿಂಬಾಗಿಲಿನಿಂದ ಹೊರಬಂದು ಬೊಬ್ಬೆ ಹಾಕಿದ್ದು, ಸ್ಥಳೀಯರು ಸೇರುವಷ್ಟರಲ್ಲಿ ಆಗಂತುಕರು ತಾವು ಬಂದಿದ್ದ ಬೈಕ್, ಸ್ಕೂಟರಲ್ಲಿ ಪರಾರಿಯಾಗಿದ್ದಾರೆ. ಈ ಬಗ್ಗೆ ಕಂಕನಾಡಿ ಠಾಣೆಯಲ್ಲಿ ಮಹಿಳೆಯ ದೂರಿನಂತೆ ಪ್ರಕರಣ ದಾಖಲಾಗಿತ್ತು.
ಪೊಲೀಸರು ಕೋಡಿಕಲ್ ನಿವಾಸಿ, ಉರ್ವಾ ಠಾಣೆಯ ರೌಡಿಶೀಟರ್ ರಂಜಿತ್ (28), ಉರ್ವಾ ಸ್ಟೋರ್ ನಿವಾಸಿ ಅವಿನಾಶ್ (23), ಕೊಟ್ಟಾರ ಚೌಕಿಯ ಪ್ರಜ್ವಲ್(24), ಕೋಡಿಬೆಂಗ್ರೆ ನಿವಾಸಿ ದೀಕ್ಷಿತ್ (21), ಮೂಲತಃ ಬಂಟ್ವಾಳ ತಾಲೂಕಿನ ಬಾರೆಕ್ಕಾಡು ನಿವಾಸಿ ಹೇಮಂತ್ (22), ಉರ್ವಾ ಸ್ಟೋರಿನ ಧನುಷ್ (19), ಕುಂಜತ್ ಬೈಲಿನ ಯತಿರಾಜ್ (23) ಎಂಬವರನ್ನು ಬಂಧಿಸಿದ್ದಾರೆ. ಈ ಪೈಕಿ ರಂಜಿತ್ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಉರ್ವಾದಲ್ಲಿ ಒಂಬತ್ತು ಪ್ರಕರಣ ಮತ್ತು ಕಾವೂರಿನಲ್ಲಿ ಒಂದು ಪ್ರಕರಣ ಎದುರಿಸುತ್ತಿದ್ದಾನೆ. ಅವಿನಾಶ್ ಕೂಡ ಉರ್ವಾ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು ಎರಡು ಪ್ರಕರಣ ದಾಖಲಾಗಿದೆ.
Seven accused were arrested regarding the incident where a gang reportedly came armed with lethal weapons, tried to kill a woman, and vandalized her house in Shakthinagar in Mangalore.
06-05-25 09:38 pm
HK News Desk
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm