ಬ್ರೇಕಿಂಗ್ ನ್ಯೂಸ್
03-06-21 01:41 pm Headline Karnataka News Network ಕ್ರೈಂ
Photo credits : News18
ಕೋಟಾ, ಜೂ.3: ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹವನ್ನು ರಸ್ತೆಯಲ್ಲಿ ಸುಮಾರು 70-80 ಮೀಟರ್ ಎಳೆದುಕೊಂಡು ಹೋದ ಪೈಶಾಚಿಕ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಿಂದ ವರದಿಯಾಗಿದೆ. ಮಹಿಳೆಯ ಜತೆಗಿದ್ದ ಹಸುಗೂಸು ಕೂಡಾ ತಂದೆಯ ಕ್ರೌರ್ಯದಿಂದ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಆರೋಪಿಯನ್ನು ಸುನೀಲ್ ವಾಲ್ಮೀಕಿ (40) ಅಲಿಯಾಸ್ ಪಿಂಟೂ ಎಂದು ಗುರುತಿಸಲಾಗಿದೆ. ಆರೋಪಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಡಿವೈಎಸ್ಪಿ ಹೇಳಿಕೆ ನೀಡಿದ್ದಾರೆ. ಆದರೆ ಶರಣಾಗಲು ಠಾಣೆಯತ್ತ ಹೋಗುತ್ತಿದ್ದ ಆರೋಪಿ ಪಲಾಯನ ಮಾಡಿದ್ದಾನೆ ಎಂದು ಠಾಣಾಧಿಕಾರಿ ಹಂಸರಾಜ್ ಮೀನಾ ಸ್ಪಷ್ಟಪಡಿಸಿದ್ದಾರೆ.

ಪತ್ನಿ ಸೀಮಾಳನ್ನು ಮಂಗಳವಾರ ಮಧ್ಯಾಹ್ನ ಆಕೆಯ ಸಹೋದರನ ಮನೆಯಿಂದ ಆರೋಪಿ ಕರೆದುಕೊಂಡುಬಂದಿದ್ದ ಎನ್ನಲಾಗಿದೆ. ದಂಪತಿಯ ಒಂಭತ್ತು ವರ್ಷದ ಮಗ ಅಜ್ಜಿ ಮನೆಯಲ್ಲಿ ಉಳಿದಿದ್ದ. ಸಂಜೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಆರೋಪಿ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ. ಬಳಿಕ ರಸ್ತೆಯಲ್ಲಿ 70-80 ಕಿಲೋಮೀಟರ್ ದೂರವರೆಗೆ ಪತ್ನಿಯ ಮೃತದೇಹವನ್ನು ಎಳೆದಾಡಿಕೊಂಡು ಬಂದಿದ್ದನ್ನು ನೋಡಿ ಜನ ಭೀತಿಗೊಂಡರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪುಟ್ಟ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 15 ವರ್ಷ ಹಿಂದೆ ಸೀಮಾಳನ್ನು ವಿವಾಹವಾಗಿದ್ದ ಈತನಿಗೆ ಇಬ್ಬರು ಗಂಡುಮಕ್ಕಳಿದ್ದರು.
Chaos erupted in the Rampura area of Kota city in Rajasthan after a man was seen dragging the body of his deceased wife outside their house after allegedly killing her with an ax on Tuesday. He later arrived at the Rampura police station with the blood-dripping weapon and admitted his crime. He has been arrested.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 09:38 pm
HK News Desk
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm