ಬ್ರೇಕಿಂಗ್ ನ್ಯೂಸ್
03-06-21 01:41 pm Headline Karnataka News Network ಕ್ರೈಂ
Photo credits : News18
ಕೋಟಾ, ಜೂ.3: ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹವನ್ನು ರಸ್ತೆಯಲ್ಲಿ ಸುಮಾರು 70-80 ಮೀಟರ್ ಎಳೆದುಕೊಂಡು ಹೋದ ಪೈಶಾಚಿಕ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಿಂದ ವರದಿಯಾಗಿದೆ. ಮಹಿಳೆಯ ಜತೆಗಿದ್ದ ಹಸುಗೂಸು ಕೂಡಾ ತಂದೆಯ ಕ್ರೌರ್ಯದಿಂದ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಆರೋಪಿಯನ್ನು ಸುನೀಲ್ ವಾಲ್ಮೀಕಿ (40) ಅಲಿಯಾಸ್ ಪಿಂಟೂ ಎಂದು ಗುರುತಿಸಲಾಗಿದೆ. ಆರೋಪಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಡಿವೈಎಸ್ಪಿ ಹೇಳಿಕೆ ನೀಡಿದ್ದಾರೆ. ಆದರೆ ಶರಣಾಗಲು ಠಾಣೆಯತ್ತ ಹೋಗುತ್ತಿದ್ದ ಆರೋಪಿ ಪಲಾಯನ ಮಾಡಿದ್ದಾನೆ ಎಂದು ಠಾಣಾಧಿಕಾರಿ ಹಂಸರಾಜ್ ಮೀನಾ ಸ್ಪಷ್ಟಪಡಿಸಿದ್ದಾರೆ.

ಪತ್ನಿ ಸೀಮಾಳನ್ನು ಮಂಗಳವಾರ ಮಧ್ಯಾಹ್ನ ಆಕೆಯ ಸಹೋದರನ ಮನೆಯಿಂದ ಆರೋಪಿ ಕರೆದುಕೊಂಡುಬಂದಿದ್ದ ಎನ್ನಲಾಗಿದೆ. ದಂಪತಿಯ ಒಂಭತ್ತು ವರ್ಷದ ಮಗ ಅಜ್ಜಿ ಮನೆಯಲ್ಲಿ ಉಳಿದಿದ್ದ. ಸಂಜೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಆರೋಪಿ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ. ಬಳಿಕ ರಸ್ತೆಯಲ್ಲಿ 70-80 ಕಿಲೋಮೀಟರ್ ದೂರವರೆಗೆ ಪತ್ನಿಯ ಮೃತದೇಹವನ್ನು ಎಳೆದಾಡಿಕೊಂಡು ಬಂದಿದ್ದನ್ನು ನೋಡಿ ಜನ ಭೀತಿಗೊಂಡರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪುಟ್ಟ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 15 ವರ್ಷ ಹಿಂದೆ ಸೀಮಾಳನ್ನು ವಿವಾಹವಾಗಿದ್ದ ಈತನಿಗೆ ಇಬ್ಬರು ಗಂಡುಮಕ್ಕಳಿದ್ದರು.
Chaos erupted in the Rampura area of Kota city in Rajasthan after a man was seen dragging the body of his deceased wife outside their house after allegedly killing her with an ax on Tuesday. He later arrived at the Rampura police station with the blood-dripping weapon and admitted his crime. He has been arrested.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 10:54 pm
HK News Staffer
Besant Evening College: ಬೆಸೆಂಟ್ ಸಂಧ್ಯಾ ಕಾಲೇಜಿ...
17-03-26 10:12 pm
Controversial Missionary Mohan C. Lazarus’ Ud...
17-03-26 09:19 pm
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am