ಬ್ರೇಕಿಂಗ್ ನ್ಯೂಸ್
03-06-21 01:41 pm Headline Karnataka News Network ಕ್ರೈಂ
Photo credits : News18
ಕೋಟಾ, ಜೂ.3: ಪತ್ನಿಯ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿ ಹತ್ಯೆ ಮಾಡಿದ ವ್ಯಕ್ತಿಯೊಬ್ಬ ಮೃತದೇಹವನ್ನು ರಸ್ತೆಯಲ್ಲಿ ಸುಮಾರು 70-80 ಮೀಟರ್ ಎಳೆದುಕೊಂಡು ಹೋದ ಪೈಶಾಚಿಕ ಘಟನೆ ರಾಜಸ್ಥಾನದ ಕೋಟಾ ಜಿಲ್ಲೆಯಿಂದ ವರದಿಯಾಗಿದೆ. ಮಹಿಳೆಯ ಜತೆಗಿದ್ದ ಹಸುಗೂಸು ಕೂಡಾ ತಂದೆಯ ಕ್ರೌರ್ಯದಿಂದ ತೀವ್ರವಾಗಿ ಗಾಯಗೊಂಡಿದ್ದು, ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಆರೋಪಿಯನ್ನು ಸುನೀಲ್ ವಾಲ್ಮೀಕಿ (40) ಅಲಿಯಾಸ್ ಪಿಂಟೂ ಎಂದು ಗುರುತಿಸಲಾಗಿದೆ. ಆರೋಪಿ ರಾಂಪುರ ಪೊಲೀಸ್ ಠಾಣೆಯಲ್ಲಿ ಶರಣಾಗಿದ್ದಾನೆ ಎಂದು ಡಿವೈಎಸ್ಪಿ ಹೇಳಿಕೆ ನೀಡಿದ್ದಾರೆ. ಆದರೆ ಶರಣಾಗಲು ಠಾಣೆಯತ್ತ ಹೋಗುತ್ತಿದ್ದ ಆರೋಪಿ ಪಲಾಯನ ಮಾಡಿದ್ದಾನೆ ಎಂದು ಠಾಣಾಧಿಕಾರಿ ಹಂಸರಾಜ್ ಮೀನಾ ಸ್ಪಷ್ಟಪಡಿಸಿದ್ದಾರೆ.

ಪತ್ನಿ ಸೀಮಾಳನ್ನು ಮಂಗಳವಾರ ಮಧ್ಯಾಹ್ನ ಆಕೆಯ ಸಹೋದರನ ಮನೆಯಿಂದ ಆರೋಪಿ ಕರೆದುಕೊಂಡುಬಂದಿದ್ದ ಎನ್ನಲಾಗಿದೆ. ದಂಪತಿಯ ಒಂಭತ್ತು ವರ್ಷದ ಮಗ ಅಜ್ಜಿ ಮನೆಯಲ್ಲಿ ಉಳಿದಿದ್ದ. ಸಂಜೆ ಪತಿ-ಪತ್ನಿ ನಡುವೆ ಜಗಳವಾಗಿದ್ದು, ಆರೋಪಿ ಕೊಡಲಿಯಿಂದ ಪತ್ನಿ ಮೇಲೆ ಹಲ್ಲೆ ಮಾಡಿದ. ಬಳಿಕ ರಸ್ತೆಯಲ್ಲಿ 70-80 ಕಿಲೋಮೀಟರ್ ದೂರವರೆಗೆ ಪತ್ನಿಯ ಮೃತದೇಹವನ್ನು ಎಳೆದಾಡಿಕೊಂಡು ಬಂದಿದ್ದನ್ನು ನೋಡಿ ಜನ ಭೀತಿಗೊಂಡರು ಎಂದು ಠಾಣಾಧಿಕಾರಿ ವಿವರಿಸಿದ್ದಾರೆ.
ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದ ಪುಟ್ಟ ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಬುಧವಾರ ಮಗು ಮೃತಪಟ್ಟಿದೆ ಎಂದು ಹೇಳಿದ್ದಾರೆ. ಕೂಲಿ ಕಾರ್ಮಿಕನಾಗಿದ್ದ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 15 ವರ್ಷ ಹಿಂದೆ ಸೀಮಾಳನ್ನು ವಿವಾಹವಾಗಿದ್ದ ಈತನಿಗೆ ಇಬ್ಬರು ಗಂಡುಮಕ್ಕಳಿದ್ದರು.
Chaos erupted in the Rampura area of Kota city in Rajasthan after a man was seen dragging the body of his deceased wife outside their house after allegedly killing her with an ax on Tuesday. He later arrived at the Rampura police station with the blood-dripping weapon and admitted his crime. He has been arrested.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm