ಬ್ರೇಕಿಂಗ್ ನ್ಯೂಸ್
06-06-21 12:32 pm Udupi Correspondent ಕ್ರೈಂ
ಕುಂದಾಪುರ, ಜೂ.6: ಕೊಳವೆ ಬಾವಿಗೆ ಅನುಮತಿ ನೀಡದ ದ್ವೇಷದಲ್ಲಿ ವ್ಯಕ್ತಿಯೊಬ್ಬನನ್ನು ಗ್ರಾಪಂ ಅಧ್ಯಕ್ಷನೇ ಕಾರು ಡಿಕ್ಕಿಯಾಗಿಸಿ ಕೊಲೆಗೈದ ಘಟನೆ ಯಡಮೊಗೆ ಗ್ರಾಪಂ ವ್ಯಾಪ್ತಿಯ ಹೊಸಬಾಳು ಎಂಬಲ್ಲಿ ನಡೆದಿದೆ.
ಹೊಸಬಾಳು ನಿವಾಸಿ ಉದಯ ಗಾಣಿಗ (40) ಕೊಲೆಯಾದ ವ್ಯಕ್ತಿ. ಮೃತರ ಪತ್ನಿ ನೀಡಿದ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿ ಯಡಮೊಗೆ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಯಡಿಯಾಳನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಬೋರ್ವೆಲ್ ಪರಾವನಿಗೆ ನೀಡುವ ವಿಚಾರದಲ್ಲಿ ಇಬ್ಬರ ಮಧ್ಯೆ ಜಗಳ ನಡೆದಿತ್ತು. ಇದೇ ದ್ವೇಷದಲ್ಲಿ ಪ್ರಾಣೇಶ್ ಯಡಿಯಾಳ ತನ್ನ ಕಾರು ಚಲಾಯಿಸುತ್ತಿದ್ದ ವೇಳೆ ಅಡ್ಡಸಿಕ್ಕಿದ ಉದಯ ಗಾಣಿಗ ಅವರ ಬೈಕಿಗೆ ಡಿಕ್ಕಿಯಾಗಿಸಿ ಕೊಲೆಗೈದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶನಿವಾರ ರಾತ್ರಿ ಘಟನೆ ನಡೆದಿದ್ದು ಗಂಭೀರ ಗಾಯಗೊಂಡ ಉದಯ ಗಾಣಿಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ. ಈ ವೇಳೆ ಆರೋಪಿ ತನ್ನ ಕಾರನ್ನು ಬಿಟ್ಟು ಪರಾರಿಯಾಗಿದ್ದ. ಬಳಿಕ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಹಾಗೂ ಇತರ ಅಧಿಕಾರಿಗಳು ತೆರಳಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಉದಯ ಗಾಣಿಗ ಜಡ್ಕಲ್ನಲ್ಲಿ ಕೃಷಿ ಕೇಂದ್ರವನ್ನು ಹೊಂದಿದ್ದು ಬೋರ್ ವೆಲ್ ಅನುಮತಿ ನೀಡುವ ಜವಾಬ್ದಾರಿ ಹೊಂದಿದ್ದರು.
ಮೃತರು ಪತ್ನಿ, ಎರಡು ಮಕ್ಕಳನ್ನು ಅಗಲಿದ್ದಾರೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident a 40-year-old social activist was found dead in a suspicious manner after a car ran over him at Yadamoge under the Shankaranarayana Police station limits on Saturday, June 5 night.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm