ಬ್ರೇಕಿಂಗ್ ನ್ಯೂಸ್
08-06-21 01:22 pm Headline Karnataka News Network ಕ್ರೈಂ
Photo credits : Indiatoday
ಡರ್ಬನ್, ಜೂನ್ 8: ಆರು ದಶಲಕ್ಷ ರ್ಯಾಂಡ್ ವಂಚನೆ ಮತ್ತು ಖೋಟಾ ಪ್ರಕರಣದಲ್ಲಿ ಆರೋಪಿಯಾಗಿದ್ದ ಮಹಾತ್ಮ ಗಾಂಧಿಯವರ ಮರಿ ಮೊಮ್ಮಗಳಿಗೆ ಡರ್ಬನ್ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಆಶಿಶ್ ಲತಾ ರಾಮ್ಗೋಬಿನ್ (56) ಅವರನ್ನು ನ್ಯಾಯಾಲಯ ಸೋಮವಾರ ತಪ್ಪಿತಸ್ಥರೆಂದು ಪರಿಗಣಿಸಿದೆ.

ಭಾರತದಿಂದ ಅಕ್ರಮವಾಗಿ ಸಾಗಾಟಕ್ಕೆ ಅನುವಾಗಲು ಆಮದು ಮತ್ತು ಕಸ್ಟಮ್ಸ್ ಸುಂಕವನ್ನು ತೆರವುಗೊಸುವ ಬಗ್ಗೆ ಉದ್ಯಮಿ ಎಸ್.ಆರ್. ಮಹಾರಾಜ್ ಅವರಿಗೆ ಲಾಭದ ಪಾಲು ನೀಡುವ ಭರವಸೆ ನೀಡಿದ ಆರೋಪ ಆಕೆಯ ಮೇಲಿದೆ.
ಖ್ಯಾತ ಸಾಮಾಜಿಕ ಹಕ್ಕುಗಳ ಕಾರ್ಯಕರ್ತರಾದ ಎಲಾ ಗಾಂಧಿ ಮತ್ತು ದಿವಂಗತ ಮೇವಾ ರಾಮ್ಗೋಬಿಂದ್ ಅವರ ಪುತ್ರಿ ಲತಾ ರಾಮ್ಗೋಬಿನ್ ಅವರಿಗೆ ಶಿಕ್ಷೆ ವಿಧಿಸಿರುವ ನ್ಯಾಯಾಲಯ ಮೇಲ್ಮನವಿ ಸಲ್ಲಿಸಲು ಅವಕಾಶ ನಿರಾಕರಿಸಿತು.

2015 ರಲ್ಲಿ ಲತಾ ರಾಮ್ಗೋಬಿನ್ ವಿರುದ್ಧದ ಪ್ರಕರಣದ ವಿಚಾರಣೆ ಪ್ರಾರಂಭವಾದಾಗ, ನ್ಯಾಷನಲ್ ಪ್ರಾಸಿಕ್ಯೂಟಿಂಗ್ ಪ್ರಾಧಿಕಾರದ (ಎನ್ಪಿಎ) ಬ್ರಿಗೇಡಿಯರ್ ಹಂಗ್ವಾನಿ ಮುಲಾಡ್ಜಿ ಅವರು ಭಾರತದಿಂದ ಮೂರು ಲಿನಿನ್ ಕಂಟೇನರ್ಗಳನ್ನು ಸಾಗಿಸಲಾಗುತ್ತಿದೆ ಎಂದು ಸಂಭಾವ್ಯ ಹೂಡಿಕೆದಾರರಿಗೆ ಮನವರಿಕೆ ಮಾಡಲು ನಕಲಿ ಇನ್ವಾಯ್ಸ್ ಮತ್ತು ದಾಖಲೆಗಳನ್ನು ಒದಗಿಸಿದ್ದಾರೆ ಎಂದು ಹೇಳಿದ್ದರು

ಆ ಸಮಯದಲ್ಲಿ, ಲತಾ ರಾಮ್ಗೋಬಿನ್ 50,000 ರಾಂಡ್ನ ಜಾಮೀನಿನ ಮೇಲೆ ಬಿಡುಗಡೆಯಾದರು. ಸೋಮವಾರ, ವಿಚಾರಣೆಯ ಸಮಯದಲ್ಲಿ ನ್ಯಾಯಾಲಯಕ್ಕೆ ಲತಾ ರಾಮ್ಗೋಬಿನ್ ಅವರು 2015 ರ ಆಗಸ್ಟ್ನಲ್ಲಿ ನ್ಯೂ ಆಫ್ರಿಕಾ ಅಲೈಯನ್ಸ್ ಪಾದರಕ್ಷೆಗಳ ವಿತರಕರ ನಿರ್ದೇಶಕ ಮಹಾರಾಜ್ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿಸಲಾಯಿತು. ಕಂಪನಿಯು ಬಟ್ಟೆ, ಲಿನಿನ್ ಮತ್ತು ಪಾದರಕ್ಷೆಗಳನ್ನು ಆಮದು ಮಾಡಿಕೊಂಡು ಮಾರಾಟ ಮಾಡುತ್ತದೆ.

ಮಹಾರಾಜ್ ಅವರ ಕಂಪನಿಯು ಇತರ ಕಂಪನಿಗಳಿಗೆ ಲಾಭ-ಷೇರು ಆಧಾರದ ಮೇಲೆ ಹಣಕಾಸು ಒದಗಿಸುತ್ತದೆ. ದಕ್ಷಿಣ ಆಫ್ರಿಕಾದ ಹಾಸ್ಪಿಟಲ್ ಗ್ರೂಪ್ ನೆಟ್ಕೇರ್ಗಾಗಿ ಮೂರು ಕಂಟೇನರ್ ಲಿನಿನ್ ಆಮದು ಮಾಡಿಕೊಂಡಿದ್ದಾಗಿ ಲತಾ ರಾಮ್ಗೋಬಿನ್ ಮಹಾರಾಜ್ಗೆ ತಿಳಿಸಿದ್ದರು. "ಆಮದು ವೆಚ್ಚ ಮತ್ತು ಕಸ್ಟಮ್ಸ್ ಗಾಗಿ ಗಿ ಪಾವತಿಸಲು ಅವರು ಹಣಕಾಸಿನ ತೊಂದರೆಗಳನ್ನು ಎದುರಿಸುತ್ತಿದ್ದಾರೆ ಮತ್ತು ಬಂದರಿನಲ್ಲಿ ಸರಕುಗಳನ್ನು ತೆರವುಗೊಳಿಸಲು ಅವರಿಗೆ ಹಣದ ಅವಶ್ಯಕತೆಯಿದೆ ಎಂದು ಅವರು ಹೇಳಿದರು.
Mahatma Gandhi's great-granddaughter, Ashish Lata Ramgobin has been sentenced to seven years in prison in a six-million rand (Rs 3.22 crore) fraud and forgery case.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm