ಬ್ರೇಕಿಂಗ್ ನ್ಯೂಸ್
11-06-21 02:57 pm Mangalore Correspondent ಕ್ರೈಂ
ಮಂಗಳೂರು, ಜೂನ್ 11: ಭಾರೀ ಪ್ರಮಾಣದ ನಿಷೇಧಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಪೊಲೀಸರು ಕೇರಳ ಮೂಲದ ಖದೀಮನನ್ನು ಬಂಧಿಸಿದ್ದಾರೆ.
ಕೇರಳದ ಕ್ಯಾಲಿಕಟ್ ಜಿಲ್ಲೆಯ ಮೊಹಮ್ಮದ್ ಅಜಿನಾಸ್ (25) ಬಂಧಿತ ವ್ಯಕ್ತಿ. ಈತನಲ್ಲಿದ್ದ 15 ಗ್ರಾಮ್ 15 ಮಿಲೀ ಗ್ರಾಂ ತೂಕದ 840 ಎಲ್ ಎಸ್ ಡಿ ಡ್ರಗ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಮೈದಾನದ ಬಳಿ ಗ್ರಾಹಕರಿಗೆ ಕಾದಿರುತ್ತಿದ್ದ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.




ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಎಲ್ ಎಸ್ ಡಿ ಸ್ಟಾಂಪ್ ಅತ್ಯಂತ ಬೆಲೆಬಾಳುವಂಥದ್ದು. ಒಂದು ಸ್ಟ್ರಿಪ್ ಗೆ ಸಾಮಾನ್ಯವಾಗಿ 2ರಿಂದ ಆರು ಸಾವಿರ ರೂ. ಬೆಲೆಯಿದ್ದು ಶ್ರೀಮಂತರು ಮಾತ್ರ ಇದನ್ನು ಖರೀದಿ ಮಾಡುತ್ತಾರೆ. ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಹೈಎಂಡ್ ಪಾರ್ಟಿ ನಡೆಸುವ ಮಂದಿಯೇ ಇದರ ಗ್ರಾಹಕರು. 840 ಸ್ಟ್ರಿಪ್ ದರ 16.80 ಲಕ್ಷ ಆಗಿದ್ದು, ಈತನ ಹಿಂದೆ ಯಾರೆಲ್ಲ ಇದ್ದಾರೆ. ಈತನ ಹಿಂದೆ ಬೇರೆ ಯಾರು ಪೆಡ್ಲರ್ ಗಳಿದ್ದಾರೆ ಎನ್ನೋದನ್ನು ಪತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕದ್ರಿ ಠಾಣೆಗೆ ಹಸ್ತಾಂತರ ಮಾಡಿದ್ದಾರೆ. ಅಜಿನಾಸ್ ಜೊತೆಗಿದ್ದ ಮೋಟಾರ್ ಸೈಕಲ್ ಮತ್ತು ಎರಡು ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಮಂಗಳೂರಿನಲ್ಲಿ ಮೊದಲ ಬಾರಿಗೆ ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿದೆ. ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟದ ಪತ್ತೆಗಾಗಿ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಇದೇ ತಂಡ ಕಾರ್ಯಾಚರಣೆ ನಡೆಸಿದೆ.
ಮಹತ್ವದ ಕಾರ್ಯಾಚರಣೆ ನಡೆಸಿದ ಹರಿರಾಮ್ ಶಂಕರ್ ನೇತೃತ್ವದ ತಂಡಕ್ಕೆ ಅಭಿನಂದಿಸಿ ಕಮಿಷನರ್ ಶಶಿಕುಮಾರ್, ತಂಡಕ್ಕೆ ಬಹುಮಾನ ರೂಪದಲ್ಲಿ ಹತ್ತು ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.
Kadri police arrested one person and seized 840 LSD strips worth Rs 16,80,000. The accused arrested is identified as Mohammed Ajinas (25) from Calicut, Kerala. LSD is a psychotropic drug. One strip of the same cost from Rs 2,000 to Rs 6,000.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm