ಬ್ರೇಕಿಂಗ್ ನ್ಯೂಸ್
11-06-21 02:57 pm Mangalore Correspondent ಕ್ರೈಂ
ಮಂಗಳೂರು, ಜೂನ್ 11: ಭಾರೀ ಪ್ರಮಾಣದ ನಿಷೇಧಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಪೊಲೀಸರು ಕೇರಳ ಮೂಲದ ಖದೀಮನನ್ನು ಬಂಧಿಸಿದ್ದಾರೆ.
ಕೇರಳದ ಕ್ಯಾಲಿಕಟ್ ಜಿಲ್ಲೆಯ ಮೊಹಮ್ಮದ್ ಅಜಿನಾಸ್ (25) ಬಂಧಿತ ವ್ಯಕ್ತಿ. ಈತನಲ್ಲಿದ್ದ 15 ಗ್ರಾಮ್ 15 ಮಿಲೀ ಗ್ರಾಂ ತೂಕದ 840 ಎಲ್ ಎಸ್ ಡಿ ಡ್ರಗ್ಸನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕದ್ರಿ ಮೈದಾನದ ಬಳಿ ಗ್ರಾಹಕರಿಗೆ ಕಾದಿರುತ್ತಿದ್ದ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.




ಈ ಬಗ್ಗೆ ಮಾಹಿತಿ ನೀಡಿದ ಪೊಲೀಸ್ ಕಮಿಷನರ್ ಶಶಿಕುಮಾರ್, ಎಲ್ ಎಸ್ ಡಿ ಸ್ಟಾಂಪ್ ಅತ್ಯಂತ ಬೆಲೆಬಾಳುವಂಥದ್ದು. ಒಂದು ಸ್ಟ್ರಿಪ್ ಗೆ ಸಾಮಾನ್ಯವಾಗಿ 2ರಿಂದ ಆರು ಸಾವಿರ ರೂ. ಬೆಲೆಯಿದ್ದು ಶ್ರೀಮಂತರು ಮಾತ್ರ ಇದನ್ನು ಖರೀದಿ ಮಾಡುತ್ತಾರೆ. ಮಂಗಳೂರಿನಲ್ಲಿ ವಿದ್ಯಾರ್ಥಿಗಳು ಮತ್ತು ಹೈಎಂಡ್ ಪಾರ್ಟಿ ನಡೆಸುವ ಮಂದಿಯೇ ಇದರ ಗ್ರಾಹಕರು. 840 ಸ್ಟ್ರಿಪ್ ದರ 16.80 ಲಕ್ಷ ಆಗಿದ್ದು, ಈತನ ಹಿಂದೆ ಯಾರೆಲ್ಲ ಇದ್ದಾರೆ. ಈತನ ಹಿಂದೆ ಬೇರೆ ಯಾರು ಪೆಡ್ಲರ್ ಗಳಿದ್ದಾರೆ ಎನ್ನೋದನ್ನು ಪತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಸಿಸಿಬಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಕದ್ರಿ ಠಾಣೆಗೆ ಹಸ್ತಾಂತರ ಮಾಡಿದ್ದಾರೆ. ಅಜಿನಾಸ್ ಜೊತೆಗಿದ್ದ ಮೋಟಾರ್ ಸೈಕಲ್ ಮತ್ತು ಎರಡು ಮೊಬೈಲ್ ಫೋನನ್ನು ವಶಕ್ಕೆ ಪಡೆದಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಮಂಗಳೂರಿನಲ್ಲಿ ಮೊದಲ ಬಾರಿಗೆ ಎಲ್ ಎಸ್ ಡಿ ಡ್ರಗ್ಸ್ ಪತ್ತೆಯಾಗಿದೆ. ಮಂಗಳೂರಿನಲ್ಲಿ ಡ್ರಗ್ಸ್ ಮಾರಾಟದ ಪತ್ತೆಗಾಗಿ ಡಿಸಿಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ತಂಡ ರಚಿಸಲಾಗಿದ್ದು, ಇದೇ ತಂಡ ಕಾರ್ಯಾಚರಣೆ ನಡೆಸಿದೆ.
ಮಹತ್ವದ ಕಾರ್ಯಾಚರಣೆ ನಡೆಸಿದ ಹರಿರಾಮ್ ಶಂಕರ್ ನೇತೃತ್ವದ ತಂಡಕ್ಕೆ ಅಭಿನಂದಿಸಿ ಕಮಿಷನರ್ ಶಶಿಕುಮಾರ್, ತಂಡಕ್ಕೆ ಬಹುಮಾನ ರೂಪದಲ್ಲಿ ಹತ್ತು ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ.
Kadri police arrested one person and seized 840 LSD strips worth Rs 16,80,000. The accused arrested is identified as Mohammed Ajinas (25) from Calicut, Kerala. LSD is a psychotropic drug. One strip of the same cost from Rs 2,000 to Rs 6,000.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm