ಬ್ರೇಕಿಂಗ್ ನ್ಯೂಸ್
12-06-21 04:57 pm Bangalore Correspondent ಕ್ರೈಂ
ಬೆಂಗಳೂರು, ಜೂನ್ 12: ರೌಡಿ ಕಾಡುಬೀಸನಹಳ್ಳಿ ರೋಹಿತ್ ಈತನಿಗೆ ಕಂಟ್ರಿಮೇಡ್ ಪಿಸ್ತೂಲ್ ಹಾಗೂ ಶಸ್ತ್ರಾಸ್ತ್ರಗಳನ್ನು ಪೂರೈಕೆ ಮಾಡಿದ್ದ ಆರೋಪದಲ್ಲಿ ಕಲಬುರಗಿ ಮೂಲದ ನಟೋರಿಯಸ್ ರೌಡಿ ಸೇರಿ ಮೂವರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿಯ ಸತೀಶ್ ಅಲಿಯಾಸ್ ಮಾರ್ಕೆಟ್ ಸತೀಶ್ (38) ಬಂಧಿತ ಆರೋಪಿ. ಆರೋಪಿಯನ್ನು 15 ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಇನ್ನು ಇಬ್ಬರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಾಡುಬೀಸನಹಳ್ಳಿ ಸೋಮ ಮತ್ತು ರೋಹಿತ್ ರೌಡಿಗಳಾಗಿದ್ದು, ಪರಸ್ಪರ ಹತ್ಯೆಗೆ ಸಂಚು ರೂಪಿಸಿದ್ದರು. ಎರಡು ತಿಂಗಳ ಹಿಂದೆ ರೋಹಿತ್, ಸೋಮನ ಹತ್ಯೆಗೆ ಸಂಚು ರೂಪಿಸಿ ಮಂಗಳೂರಿನಿಂದ ಯುವಕರನ್ನು ಕರೆಸಿದ್ದ. ಈ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ರೋಹಿತ್ ಸೇರಿ ಏಳು ಮಂದಿಯನ್ನು ಬಂಧಿಸಿದ್ದಾರೆ.

ಕೆಲ ದಿನಗಳ ಹಿಂದೆ ಜೈಲಿನಿಂದ ಬಿಡುಗಡೆಯಾದ ರೋಹಿತ್ ಹತ್ಯೆಗೆ ಸಂಚು ರೂಪಿಸಿದ ಸೋಮ ಮತ್ತು ಆತನ ಸಹಚರರನ್ನು ಪೊಲೀಸರು ಬಂಧಿಸಿದ್ದರು. ರೋಹಿತ್ ಮತ್ತು ಆತನ ಸಹಚರರ ವಿಚಾರಣೆಯಲ್ಲಿ ಸತೀಶ್ ಹೆಸರು ಬಾಯಿಬಿಟ್ಟಿದ್ದರು. ಅಲ್ಲದೆ, ಇದೇ ಸತೀಶ್ ರೌಡಿ ಜೀತು, ಗಣೇಶ್ ಕೊಲೆಗೆ ಗೊಟ್ಟಿಗೆರೆ ಪರಮೇಶ್ ಗೂ ಕಂಟ್ರಿಮೇಡ್ ಪಿಸ್ತೂಲ್ ಕೊಟ್ಟಿದ್ದರು ಎಂಬುದು ಗೊತ್ತಾಗಿದೆ.
ಮತ್ತೊಂದೆಡೆ ಖಚಿತ ಮಾಹಿತಿ ಮೇರೆಗೆ ಇಸ್ರೋ ಲೇಔಟ್ ನ ಶಂಕರ್ ಎಂಬಾತನ ಮನೆ ಮೇಲೆ ದಾಳಿ ನಡೆಸಿದಾಗ ಸತೀಶ್ ಮಾರಾಟ ಮಾಡಿದ್ದ ಪಿಸ್ತೂಲ್ ಸಿಕ್ಕಿದೆ. ಈ ಮಾಹಿತಿ ಮೇರೆಗೆ ಹೈದರಾಬಾದ್ ನಲ್ಲಿ ತಲೆಮರೆಸಿಕೊಂಡಿದ್ದ ಸತೀಶ್ನನ್ನು ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಸತೀಶ್ ಅಲಿಯಾಸ್ ಮಾರ್ಕೆಟ್ ಸತೀಶ್ ವಿರುದ್ಧ ಕಲಬುರಗಿಯಲ್ಲಿ ನಾಲ್ಕು ಕೊಲೆ ಸೇರಿ 30ಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಈತ ಮತ್ತು ಈತನ ಸಹಚರರ ಉಪಟಳಕ್ಕೆ ಬ್ರೇಕ್ ಹಾಕಲು ಕಲಬುರಗಿ ಪೊಲೀಸರು ಸತೀಶ್ ಸಹಚರ ಕರಿ ಚಿರತೆ ಸೇರಿ ಇಬ್ಬರನ್ನು ಎನ್ಕೌಂಟರ್ ಮಾಡಿದ್ದರು.

ಈತ ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ್ ಹಾಗೂ ಇತರೆಡೆಯಿಂದ ಕಂಟ್ರಿಮೇಡ್ ಪಿಸ್ತೂಲ್ ಗಳನ್ನು 10-15 ಸಾವಿರ ರೂ.ಗೆ ತರಿಸಿ ಕರ್ನಾಟಕದ ರೌಡಿಗಳಿಗೆ 80 ಸಾವಿರದಿಂದ 1 ಲಕ್ಷ ರೂ.ವರೆಗೆ ಮಾರಾಟ ಮಾಡುತ್ತಿದ್ದ. ಅದರಿಂದ ಕೋಟ್ಯಂತರ ರೂ. ಹಣಗಳಿಸಿದ್ದು, ಹೈದರಾಬಾದಿನಲ್ಲಿ ಮೂರು ಕೋಟಿ ರೂ. ವೆಚ್ಚದಲ್ಲಿ ಐಷಾರಾಮಿ ಮನೆ ನಿರ್ಮಿಸಿದ್ದಾನೆ. ಕಲಬುರಗಿಯಲ್ಲಿಯೂ ಕೋಟ್ಯಂತರ ರೂ. ಮೌಲ್ಯದ ಮನೆ ನಿರ್ಮಿಸಿದ್ದು, ಹೊಸ ಕಾರುಗಳನ್ನು ಖರೀದಿಸಿದ್ದಾನೆ.
ಸದ್ಯ ಆರೋಪಿ ಸತೀಶ್ ಹಾಗೂ ಮತ್ತಿಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಯುತ್ತಿದೆ. ಇದುವರೆಗೂ 70ಕ್ಕೂ ಅಧಿಕ ಪಿಸ್ತೂಲುಗಳನ್ನು ಮಾರಾಟ ಮಾಡಿದ್ದಾನೆ ಎಂಬುದು ಪತ್ತೆಯಾಗಿದೆ. ರೌಡಿಗಳು ಮಾತ್ರವಲ್ಲದೆ, ಬೇರೆ ಯಾರಿಗೆಲ್ಲ ಪಿಸ್ತೂಲ್ಗಳನ್ನು ಮಾರಾಟ ಮಾಡಿದ್ದಾರೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಬೇಕಿದೆ ಎಂದು ಮೂಲಗಳು ತಿಳಿಸಿವೆ.
CCB Police Arrested 3 country-made Pistol Illegal Dealers in Bengaluru.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm