ಬ್ರೇಕಿಂಗ್ ನ್ಯೂಸ್
13-06-21 04:34 pm Mangaluru Correspondent ಕ್ರೈಂ
ಉಳ್ಳಾಲ, ಜೂ.13: ಬೆಂಗಳೂರಿನ ಕಮ್ಮನಹಳ್ಳಿಯಿಂದ 4 ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ MDMA ಮಾದಕ ವಸ್ತುವನ್ನು ಕೇರಳಕ್ಕೆ ಸಾಗಿಸುತ್ತಿದ್ದ ಕಾರನ್ನು ನಾಟೆಕಲ್ ಎಂಬಲ್ಲಿ ಕೊಣಾಜೆ ಪಿಎಸ್ಐ ಮಲ್ಲಿಕಾರ್ಜುನ್ ನೇತೃತ್ವದ ತಂಡ ಇಂದು ಬೆಳಗ್ಗೆ ಜಪ್ತಿ ಮಾಡಿದ್ದು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.
ಕೊಣಾಜೆ ಠಾಣೆ ವ್ಯಾಪ್ತಿಯ ನಾಟೆಕಲ್ ಸಮೀಪದ ವಿಜಯ ನಗರ ಎಂಬಲ್ಲಿ ನಿಷೇಧಿತ ಮಾದಕ ವಸ್ತು MDMA ಸಾಗಿಸುತ್ತಿದ್ದ ಸ್ವಿಫ್ಟ್ ಕಾರನ್ನು ಕೊಣಾಜೆ ಠಾಣೆ ಸಬ್ ಇನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದಾರ್ ನೇತೃತ್ವದ ತಂಡ ತಡೆದು ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಕಾಸರಗೋಡು ನಿವಾಸಿಗಳಾದ ಶಫೀಕ್ ಮತ್ತು ಅಲ್ತಾಫ್ ಬಂಧಿತ ಆರೋಪಿಗಳು.


ಶಫೀಕ್ ಮತ್ತು ಅಲ್ತಾಫ್ ಬೆಂಗಳೂರಿನ ಕಮ್ಮನ ಹಳ್ಳಿಯಿಂದ 3,90,000 ರೂಪಾಯಿ ಮೌಲ್ಯದ ನಿಷೇಧಿತ ಮಾದಕ ಪದಾರ್ಥ MDMA ಯನ್ನು ಸ್ವಿಪ್ಟ್ ಕಾರಲ್ಲಿ ಮಂಗಳೂರು - ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಮೂಲಕ ತರುತ್ತಿದ್ದರು. ಹೆದ್ದಾರಿಯಿಂದ ಮೆಲ್ಕಾರ್, ಮುಡಿಪು, ನಾಟೆಕಲ್ ಮಾರ್ಗವಾಗಿ ಕೇರಳಕ್ಕೆ ಸಾಗಿಸುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕೊಣಾಜೆ ಠಾಣಾ ಸಬ್ಬಿನ್ಸ್ ಪೆಕ್ಟರ್ ಮಲ್ಲಿಕಾರ್ಜುನ್ ಬಿರಾದರ್ ಅವರು ನಾಟೆಕಲ್ ನ ವಿಜಯನಗರ ಎಂಬಲ್ಲಿ ಸ್ವಿಫ್ಟ್ ಕಾರನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಕಾರಿನಲ್ಲಿದ್ದ ಆರೋಪಿಗಳನ್ನ ವಿಚಾರಿಸಿದಾಗ ನಿಷೇಧಿತ ಮಾದಕ ವಸ್ತುಗಳನ್ನ ಕೇರಳಕ್ಕೆ ಸಾಗಿಸುತ್ತಿರುವ ಬಗ್ಗೆ ಹೇಳಿದ್ದು, ಬಂಧಿತ ಆರೋಪಿಗಳಿಂದ 4 ಮೊಬೈಲ್ ಫೋನ್, ಒಂದು ಸ್ವಿಪ್ಟ್ ಕಾರು ಸೇರಿ ಒಟ್ಟು 9,01,000 ಮೌಲ್ಯದ ಸೊತ್ತನ್ನ ವಶಪಡಿಸಿಕೊಳ್ಳಲಾಗಿದೆ.
ಡಿಸಿಪಿ ಹರಿರಾಂ ಶಂಕರ್ ನಿರ್ದೇಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ರಂಜಿತ್ ಕುಮಾರ್ ಬಂಡಾರು ನೇತೃತ್ವದಲ್ಲಿ ಕೊಣಾಜೆ ಠಾಣೆ ನಿರೀಕ್ಷಕರಾದ ಪ್ರಕಾಶ್ ದೇವಾಡಿಗ, ಪಿಎಸ್ಐ ಶರಣಪ್ಪ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
Konaje police on Sunday June 13 intercepted a car at Natekal, Manjanady and arrested two persons who were transporting banned MDMA drugs. The car with with registration number KL 14 R 3536 was heading from Uppinangady to Kerala through Malkar, Mudipu and Natekal route.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm