ಬ್ರೇಕಿಂಗ್ ನ್ಯೂಸ್
18-06-21 04:38 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 18: ಹನಿಟ್ರ್ಯಾಪ್ ಮಾಡಿ ಹಣ ಪೀಕಿಸೋಕೆ ಕೆಲವರು ಏನೆಲ್ಲ ಕಸರತ್ತು ಮಾಡುತ್ತಾರೆ ಅನ್ನುವುದನ್ನು ಪೊಲೀಸರು ಕೂಡ ಊಹಿಸಿಕೊಳ್ಳಲು ಸಾಧ್ಯವಾಗಲ್ಲ. ಇಲ್ಲೊಂದು ಯುವ ಜೋಡಿ, ಫೇಸ್ಬುಕ್ ನಲ್ಲಿ ಫ್ರೆಂಡ್ ರೀತಿ ನಾಟಕವಾಡಿ ಬಳಿಕ ಅವರನ್ನೇ ತಮ್ಮ ದಾಳಕ್ಕೆ ಬೀಳಿಸಿ ಬೋಳಿಸುವ ಕೆಲಸ ಮಾಡುತ್ತಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ಯುವತಿಯೊಬ್ಬಳು ನೀಡಿದ ದೂರು ಆಧರಿಸಿ, ಬೆನ್ನು ಬಿದ್ದ ಚಂದ್ರಾ ಲೇಔಟ್ ಠಾಣೆಯ ಪೊಲೀಸರು ಕಾವ್ಯ ಮತ್ತು ಕೃಷ್ಣ ಎಂಬ ಹರಾಮಿ ಯುವಜೋಡಿಯನ್ನು ಬಂಧಿಸಿದ್ದಾರೆ. ಕಾವ್ಯಾ ಫೇಸ್ಬುಕ್ ನಲ್ಲಿ ಆಕ್ಟಿವ್ ಆಗಿದ್ದು, ಸುಂದರಿ ಯುವತಿಯರಿಗೆ ಫ್ರೆಂಡ್ ರಿಕ್ವೆಸ್ಟ್ ಕಳಿಸಿ ಹೊಸತಾಗಿ ಪರಿಚಯ ಮಾಡಿಕೊಳ್ಳುತ್ತಿದ್ದಳು. ಬಳಿಕ ಪರಿಚಯ, ಸ್ನೇಹಕ್ಕೆ ತಿರುಗಿ ಮನೆಗೇ ಕರೆಯುತ್ತಾಳೆ. ಮನೆಗೆ ಕರೆಸಿ, ಮತ್ತು ಬರಿಸುವ ಜ್ಯೂಸ್ ಕೊಟ್ಟು ತನ್ನ ಗಂಡನಿಂದಲೇ ಕಿರಾತಕ ಕೆಲಸ ಮಾಡಿಸುತ್ತಾಳೆ.

ದೂರು ನೀಡಿದ್ದ ಯುವತಿಗೂ ಆರು ತಿಂಗಳ ಹಿಂದೆ ಫೇಸ್ಬುಕ್ ನಲ್ಲಿ ಕಾವ್ಯಾ ಪರಿಚಯ ಆಗಿತ್ತು. ಸ್ನೇಹ ಬೆಳೆಸಿ ಮನೆಗೆ ಬರುವಂತೆ ಕರೆದಿದ್ದು, ಅಲ್ಲಿ ತೆರಳಿದ್ದಾಗ ಜ್ಯೂಸ್ ಕುಡಿಸಿ ಮಂಪರಿನ ಸ್ಥಿತಿಗೆ ಹೋಗಿದ್ದಳು. ಏನಾಗುತ್ತಿದೆ ಅನ್ನುವ ಪರಿವೆ ಇಲ್ಲದಾಗ, ಆಕೆಯನ್ನು ವಿವಸ್ತ್ರ ಮಾಡಿ ಕಾವ್ಯಾಳ ಗಂಡ ಕೃಷ್ಣ ಮತ್ತು ಸಾಗರ್ ಎಂಬ ಮತ್ತೊಬ್ಬ ಯುವಕ ಜೊತೆಗೆ ನಿಂತು ಫೋಟೋ ತೆಗೆಸಿಕೊಂಡಿದ್ದಾರೆ. ಬಳಿಕ ಯುವತಿ ಬಳಿಯಿದ್ದ ಚಿನ್ನದ ಉಂಗುರ, ಸರ, ಎಟಿಎಂ ಕಾರ್ಡ್ ಅನ್ನು ಆರೋಪಿಗಳು ಕಸಿದಿದ್ದು ಫೋಟೋ ತೋರಿಸಿ ಬೆದರಿಸಿದ್ದಾರೆ. ಬಳಿಕ ಖಾಸಗಿ ಫೋಟೊ ಮತ್ತು ವಿಡಿಯೋವನ್ನು ಪೊಷಕರಿಗೆ ಕಳಿಸ್ತೀವಿ, ಫೇಸ್ಬುಕ್ ನಲ್ಲಿ ಹರಿಯಬಿಡುತ್ತೇವೆ ಎಂದು ಹೇಳಿಕ ಆರು ತಿಂಗಳಿಂದ 4 ಲಕ್ಷಕ್ಕೂ ಅಧಿಕ ಹಣ ವಸೂಲಿ ಮಾಡಿದ್ದಾರೆ.

ಕಳೆದ ಜನವರಿಯಲ್ಲಿ ಚಂದ್ರಾ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಆನಂತರ ಬ್ಲಾಕ್ಮೇಲ್ ಮಾಡುತ್ತಾ ಯುವತಿಯಿಂದಲೇ ಯುವಜೋಡಿ ಸೇರಿ ಹಣ ಪೀಕಿಸಿದ್ದಾರೆ. ಕಳೆದ ಮೇ ತಿಂಗಳಲ್ಲಿ ಹಳೆ ವಿಡಿಯೋ ತೋರಿಸಿ ಯುವತಿ ಮೇಲೆ ಕೃಷ್ಣ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಳು. ಪೊಲೀಸರು ಈಗ ಯುವಜೋಡಿ ಮತ್ತು ಅವರಿಗೆ ಸಹಾಯ ನೀಡಿದ್ದ ಸಾಗರ್ ನನ್ನು ಬಂಧಿಸಿದ್ದಾರೆ.
Bangalore Young Couple arrested for making Honey Trap big-time business. Their target is on Facebook users by making friendship and then blackmailing. The couple have been arrested by Chandra Layout police station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm