ಬ್ರೇಕಿಂಗ್ ನ್ಯೂಸ್
19-06-21 02:12 pm Headline Karnataka News Network ಕ್ರೈಂ
ಮಂಡ್ಯ, ಜೂನ್ 19: ಮುಖ್ಯಮಂತ್ರಿ ಯಡ್ಡಿಯೂರಪ್ಪ ಅವರ ಪಿಎ ಅಂತ ಹೇಳಿಕೊಂಡು ಯುವಕನೊಬ್ಬ ಧರ್ಮಸ್ಥಳದ ಕೆಎಸ್ಆರ್ಟಿಸಿ ಚಾಲಕನಿಂದ ಹಣ ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿರುವ, ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದ ಪುರುಷೋತ್ತಮ್ ಎಂಬಾತ ವಂಚನೆಗೊಳಗಾದ ವ್ಯಕ್ತಿ. ಧರ್ಮಸ್ಥಳ ಡಿಪೋದಲ್ಲಿ ಚಾಲಕನಾಗಿದ್ದ ವೇಳೆ ಶೈಲೇಶ್ ಎಂಬ ಯುವಕ ಪರಿಚಯವಾಗಿದ್ದ. ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಪರಿಚಯವಾಗಿದ್ದು ಸಿಎಂ ಯಡ್ಡಿಯೂರಪ್ಪ ನನಗೆ ತುಂಬಾ ಹತ್ತಿರದವರು ಅಂತ ತನ್ನ ಮೊಬೈಲಿನಲ್ಲಿ ಫೋಟೋ ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ಯಡ್ಡಿಯೂರಪ್ಪ ಚುನಾವಣೆ ಸಂದರ್ಭ ಹಣ ಹಂಚಲು ನನಗೇ ಹಣ ಕೊಟ್ಟಿದ್ದರು ಅಂತ ಕಂತೆ ಕಂತೆ ನೋಟಿನ ಫೋಟೋವನ್ನೂ ತೋರಿಸಿ ಶೈಲೇಶ್ ನಂಬಿಕೆ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಬಳಿ ಹೇಳಿಸಿ ಏನು ಬೇಕಾದ್ರೂ ಕೆಲಸ ಮಾಡಿಸ್ತೀನಿ ಅಂತ ಹೇಳಿದ್ದಾನೆ.

ಇದನ್ನು ನಂಬಿದ ಚಾಲಕ ಪುರುಷೋತ್ತಮ್, ತನ್ನನ್ನು ಧರ್ಮಸ್ಥಳ ಡಿಪೋದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಿಸಲು ಹೇಳಿದ್ದಾನೆ. ನಿನ್ನ ಕೆಲಸ ಮಾಡಿಕೊಡುವುದಾಗಿ ಹೇಳಿದ ಶೈಲೇಶ್, ಅದಕ್ಕೆ ಅಧಿಕಾರಿಗಳಿಗೆ ಒಂದಿಷ್ಟು ಕೊಡಬೇಕಾಗುತ್ತೆ ಅಂತ ಹೇಳಿ ಹಣದ ಬೇಡಿಕೆ ಇಟ್ಟಿದ್ದಾನೆ. ಆತನ ಮಾತನ್ನು ನಂಬಿದ ಚಾಲಕ ಪುರುಷೋತ್ತಮ್, 98 ಸಾವಿರ ರೂ. ಹಣವನ್ನು ನೀಡಿದ್ದಾನೆ. ಆದರೆ, ಶೈಲೇಶ್ ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಹಣ ಕಳೆದುಕೊಂಡ ಚಾಲಕ ಪುರುಷೋತ್ತಮ್ ಈ ಬಗ್ಗೆ ಮಂಡ್ಯದಲ್ಲಿ ದೂರು ದಾಖಲಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು ಆರೋಪಿಯ ಹುಡುಕಾಟ ನಡೆದಿದೆ.
Mandya Man poses himself as CM Yediyurappas PA cheats KSRTC Driver telling him that he would make his transfer from Dharmasthala Depo to Mandya and flees with Rs. 98,000. A case has been registered at the Mandya Police Station.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm