ಬ್ರೇಕಿಂಗ್ ನ್ಯೂಸ್
19-06-21 02:12 pm Headline Karnataka News Network ಕ್ರೈಂ
ಮಂಡ್ಯ, ಜೂನ್ 19: ಮುಖ್ಯಮಂತ್ರಿ ಯಡ್ಡಿಯೂರಪ್ಪ ಅವರ ಪಿಎ ಅಂತ ಹೇಳಿಕೊಂಡು ಯುವಕನೊಬ್ಬ ಧರ್ಮಸ್ಥಳದ ಕೆಎಸ್ಆರ್ಟಿಸಿ ಚಾಲಕನಿಂದ ಹಣ ಪಡೆದು ವಂಚಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಧರ್ಮಸ್ಥಳ ಕೆಎಸ್ಸಾರ್ಟಿಸಿ ಡಿಪೋದಲ್ಲಿ ಬಸ್ ಚಾಲಕನಾಗಿರುವ, ಮಂಡ್ಯ ಜಿಲ್ಲೆಯ ಕೀಲಾರ ಗ್ರಾಮದ ಪುರುಷೋತ್ತಮ್ ಎಂಬಾತ ವಂಚನೆಗೊಳಗಾದ ವ್ಯಕ್ತಿ. ಧರ್ಮಸ್ಥಳ ಡಿಪೋದಲ್ಲಿ ಚಾಲಕನಾಗಿದ್ದ ವೇಳೆ ಶೈಲೇಶ್ ಎಂಬ ಯುವಕ ಪರಿಚಯವಾಗಿದ್ದ. ಧರ್ಮಸ್ಥಳದ ಹೋಟೆಲ್ ಒಂದರಲ್ಲಿ ಪರಿಚಯವಾಗಿದ್ದು ಸಿಎಂ ಯಡ್ಡಿಯೂರಪ್ಪ ನನಗೆ ತುಂಬಾ ಹತ್ತಿರದವರು ಅಂತ ತನ್ನ ಮೊಬೈಲಿನಲ್ಲಿ ಫೋಟೋ ತೋರಿಸಿ ನಂಬಿಸಿದ್ದಾನೆ. ಅಲ್ಲದೆ, ಯಡ್ಡಿಯೂರಪ್ಪ ಚುನಾವಣೆ ಸಂದರ್ಭ ಹಣ ಹಂಚಲು ನನಗೇ ಹಣ ಕೊಟ್ಟಿದ್ದರು ಅಂತ ಕಂತೆ ಕಂತೆ ನೋಟಿನ ಫೋಟೋವನ್ನೂ ತೋರಿಸಿ ಶೈಲೇಶ್ ನಂಬಿಕೆ ಹುಟ್ಟಿಸಿದ್ದಾನೆ. ಮುಖ್ಯಮಂತ್ರಿ ಬಳಿ ಹೇಳಿಸಿ ಏನು ಬೇಕಾದ್ರೂ ಕೆಲಸ ಮಾಡಿಸ್ತೀನಿ ಅಂತ ಹೇಳಿದ್ದಾನೆ.

ಇದನ್ನು ನಂಬಿದ ಚಾಲಕ ಪುರುಷೋತ್ತಮ್, ತನ್ನನ್ನು ಧರ್ಮಸ್ಥಳ ಡಿಪೋದಿಂದ ಮಂಡ್ಯಕ್ಕೆ ವರ್ಗಾವಣೆ ಮಾಡಿಸಲು ಹೇಳಿದ್ದಾನೆ. ನಿನ್ನ ಕೆಲಸ ಮಾಡಿಕೊಡುವುದಾಗಿ ಹೇಳಿದ ಶೈಲೇಶ್, ಅದಕ್ಕೆ ಅಧಿಕಾರಿಗಳಿಗೆ ಒಂದಿಷ್ಟು ಕೊಡಬೇಕಾಗುತ್ತೆ ಅಂತ ಹೇಳಿ ಹಣದ ಬೇಡಿಕೆ ಇಟ್ಟಿದ್ದಾನೆ. ಆತನ ಮಾತನ್ನು ನಂಬಿದ ಚಾಲಕ ಪುರುಷೋತ್ತಮ್, 98 ಸಾವಿರ ರೂ. ಹಣವನ್ನು ನೀಡಿದ್ದಾನೆ. ಆದರೆ, ಶೈಲೇಶ್ ಹಣ ಪಡೆದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ.
ಹಣ ಕಳೆದುಕೊಂಡ ಚಾಲಕ ಪುರುಷೋತ್ತಮ್ ಈ ಬಗ್ಗೆ ಮಂಡ್ಯದಲ್ಲಿ ದೂರು ದಾಖಲಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದ್ದು ಆರೋಪಿಯ ಹುಡುಕಾಟ ನಡೆದಿದೆ.
Mandya Man poses himself as CM Yediyurappas PA cheats KSRTC Driver telling him that he would make his transfer from Dharmasthala Depo to Mandya and flees with Rs. 98,000. A case has been registered at the Mandya Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm