ಬ್ರೇಕಿಂಗ್ ನ್ಯೂಸ್
22-06-21 02:53 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 22: ಟ್ರಕ್ ನಲ್ಲಿ ತುಂಬಿಕೊಂಡು ಬರುತ್ತಿದ್ದ ಭಾರೀ ಪ್ರಮಾಣದ ಗಾಂಜಾವನ್ನು ಬೆಂಗಳೂರಿನ ಎನ್ ಸಿಬಿ ಅಧಿಕಾರಿಗಳು ಪತ್ತೆಹಚ್ಚಿದ್ದು ನಾಲ್ವರನ್ನು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಹೈದರಾಬಾದ್ ನಿಂದ ಬೆಂಗಳೂರಿಗೆ ತರಲಾಗುತ್ತಿದ್ದ ಎರಡು ಸಾವಿರ ಕೇಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಗೇರು ಬೀಜ ಸಾಗಿಸುತ್ತಿದ್ದ ಲಾರಿಯಲ್ಲಿ ಬಾಕ್ಸ್ ಗಳ ಎಡೆಯಲ್ಲಿ ಗಾಂಜಾವನ್ನು ತುಂಬಿಸಲಾಗಿತ್ತು. ಬೆಂಗಳೂರು ಎನ್ ಸಿಬಿ ವಲಯ ನಿರ್ದೇಶಕ ಅಮಿತ್ ಘವಾಟೆ ಈ ಬಗ್ಗೆ ಹೇಳಿಕೆ ನೀಡಿದ್ದು, 15 ಕೋಟಿ ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾಗಿ ಮಾಹಿತಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಇಷ್ಟು ಭಾರೀ ಪ್ರಮಾಣದಲ್ಲಿ ಗಾಂಜಾ (ಮರಿಜುವಾನಾ) ಸಂಗ್ರಹವನ್ನು ಪತ್ತೆ ಮಾಡಲಾಗಿದೆ. ಗೇರು ಬೀಜಗಳ ಚೀಲಗಳ ಮಧ್ಯೆ ಎರಡು ಕೇಜಿಯಷ್ಟು ಗಾಂಜಾವನ್ನು ಪ್ಲಾಸ್ಟಿಕ್ ಪ್ಯಾಕ್ ಮಾಡಿ ತುಂಬಿಸಲಾಗಿತ್ತು. ಲಾರಿಯಲ್ಲಿ ಪೂರ್ತಿ ಪರಿಶೀಲನೆ ನಡೆಸಿದಾಗ, ಈ ರೀತಿಯ 1080 ಪ್ಲಾಸ್ಟಿಕ್ ಚೀಲಗಳಲ್ಲಿ ಗಾಂಜಾ ಅಡಗಿಸಿಟ್ಟಿರುವುದು ಪತ್ತೆಯಾಗಿದೆ ಎಂದು ಘವಾಟೆ ತಿಳಿಸಿದ್ದಾರೆ.

ಭಾರೀ ಗಾತ್ರದ ಟ್ರಕ್ಕಿನಲ್ಲಿ ಗಾಂಜಾ ತುಂಬಿಸಿಕೊಂಡು ಪುಣೆ, ಮುಂಬೈಗೆ ಸಾಗಿಸುವ ದಂಧೆ ಇದೆ. ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಮತ್ತು ಹೈದರಾಬಾದಿನ ಎನ್ ಸಿಬಿ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಹೈದರಾಬಾದಿನ ಪೆಡ್ಡಾ ಅಂಬರಪೇಟ್ ಟೋಲ್ ಪ್ಲಾಜಾದಲ್ಲಿ ಅಧಿಕಾರಿಗಳು ಟ್ರಕ್ಕನ್ನು ಅಡ್ಡಹಾಕಿ ಪರಿಶೀಲಿಸಿದಾಗ ಗಾಂಜಾ ಸಾಗಿಸುತ್ತಿರುವುದು ಪತ್ತೆಯಾಗಿದೆ. ಬಂಧಿತರನ್ನು ಮಹಾರಾಷ್ಟ್ರದ ಉಸ್ಮನಾಬಾದ್ ಜಿಲ್ಲೆಯ ಕೆ.ಕಾಳೆ, ಎಸ್. ಕಾಳೆ, ಸಿ.ಕಾಳೆ ಮತ್ತು ಬಿ.ಧೋವಲ್ಕರ್ ಎಂದು ಗುರುತಿಸಿದ್ದಾಗಿ ಅಮಿತ್ ಘವಾಟೆ ತಿಳಿಸಿದ್ದಾರೆ.
ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆ
ಆಂಧ್ರಪ್ರದೇಶ ಮತ್ತು ಒಡಿಶಾ ಗಡಿಭಾಗದ ಮಾವೋವಾದಿ ನಕ್ಸಲ್ ಪೀಡಿತ ಪ್ರದೇಶದಲ್ಲಿ ಗಾಂಜಾ ಬೆಳೆಯಲಾಗುತ್ತಿದೆ. ಇದೇ ಭಾಗದಿಂದ ಇಡೀ ದೇಶಾದ್ಯಂತ ಗಾಂಜಾ ಪೂರೈಕೆಯಾಗುತ್ತಿದೆ. ರಾಜಧಾನಿ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳಿಗೆ ಅಕ್ರಮವಾಗಿ ಸರಬರಾಜು ಆಗುತ್ತದೆ. ಇದೇ ಗಾಂಜಾ ಶ್ರೀಲಂಕಾಕ್ಕೂ ರವಾನೆ
Bangalore Two thousand kilos of Ganja found in Truck. The drugs were packed in around 1080 gunny bags.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm