ಬ್ರೇಕಿಂಗ್ ನ್ಯೂಸ್
22-06-21 03:29 pm Mangalore Correspondent ಕ್ರೈಂ
ಮಂಗಳೂರು, ಜೂನ್ 22: ದನವನ್ನು ಕಟ್ಟುವ ವಿಚಾರದಲ್ಲಿ ತಂದೆ-ಮಗನಿಗೆ ಜಗಳ ನಡೆದು, ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.



ಜೂನ್ 21ರಂದು ರಾತ್ರಿ 11.30ರ ಸುಮಾರಿಗೆ ಘಟನೆ ನಡೆದಿದ್ದು, ದನವನ್ನು ಹೊರಗೆ ಕಟ್ಟುವ ವಿಚಾರದಲ್ಲಿ ಕುಡಿದು ಬಂದಿದ್ದ ತಂದೆ ವಿಶ್ವನಾಥ ಶೆಟ್ಟಿ ಮಗನ ಜೊತೆ ಜಗಳ ನಡೆಸಿದ್ದಾನೆ. ವಿಶ್ವನಾಥ ಶೆಟ್ಟಿ(52) ಕುಡಿತದ ಚಟ ಹೊಂದಿದ್ದು, ದಿನವೂ ಮನೆಯಲ್ಲಿ ಬಂದು ಜಗಳ ಮಾಡುತ್ತಿದ್ದ. ನಿನ್ನೆ ರಾತ್ರಿ ಮಗನಿಗೆ ಹಲ್ಲೆ ನಡೆಸಿ, ಮನೆಗೆ ಚಿಲಕ ಹಾಕಿ, ಪ್ಲಾಸ್ಟಿಕ್ ಕ್ಯಾನಲ್ಲಿದ್ದ ಪೆಟ್ರೋಲನ್ನು ಸುರಿದು ಸಿಗರ್ ಲೈಟಿನಿಂದ ಬೆಂಕಿ ಹಚ್ಚಿದ್ದಾನೆ.


ಕೈ, ಕಾಲಿಗೆ ತೀವ್ರ ಸುಟ್ಟ ಗಾಯಗಳಾಗಿರುವ ಮಗ ಸ್ವಾಮಿತ್ ಶೆಟ್ಟಿ(25)ಯನ್ನು ನಗರದ ಎಜೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ವಾಮಿತ್ ಘಟನೆ ಬಗ್ಗೆ ನೀಡಿರುವ ದೂರಿನಂತೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಶ್ವನಾಥ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ.
In a tragic incident, a father reportedly tried to end his son's life by dousing him in petrol and setting him on fire. The father has since been arrested. The accused is identified as Vishwanath Shetty alias Thippi (52) and the victim is Sharmith Shetty (25). The incident was reported at Tharduliya in Jeppu on Monday, June 21 night.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm