ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm