ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.
ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 09:09 pm
HK News Desk
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am