ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm