ಬ್ರೇಕಿಂಗ್ ನ್ಯೂಸ್
22-06-21 08:07 pm Satish, Bengaluru ಕ್ರೈಂ
ಬೆಂಗಳೂರು, ಜೂನ್ 22: ಟೆಕ್ಕಿಯೊಬ್ಬರು ಕೊರೊನಾ ಸೋಂಕಿನಿಂದ ತನ್ನ ಹೆಂಡತಿಯನ್ನು ಕಳೆದುಕೊಂಡಿರುವ ನಡುವಲ್ಲೇ ಆತನ ಸ್ವಂತ ಕುಟುಂಬಸ್ಥರೇ ಬೆನ್ನಿಗೆ ಚೂರಿ ಹಾಕಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ರಾಜರಾಜೇಶ್ವರಿ ನಗರದ ಪ್ರವೀಣ್ ಹಾಗೂ ನಿಮಿತಾ ವೃತ್ತಿಯಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಗಳಾಗಿದ್ದರು. ಈ ನಡುವೆ ನಿಮಿತಾ ಕಳೆದ ಏಪ್ರಿಲ್ 20ರಂದು ಕೊರೊನಾ ಸೋಂಕಿಗೆ ಒಳಗಾಗಿ ಉಸಿರಾಟದ ಸಮಸ್ಯೆಗೆ ಸಿಲುಕಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೇ 2ರಂದು ಮೃತಪಟ್ಟಿದ್ದರು.

ಆಬಳಿಕ ಮೇ 13ಕ್ಕೆ ಪತ್ನಿಯ ಸಾವಿನ ತಿಥಿ ಕಾರ್ಯ ಮಾಡಲು ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಮುಂದಾಗಿದ್ದರು. ಈ ವೇಳೆ, ಪತ್ನಿಯ ಕುಟುಂಬಸ್ಥರು ನಿಮಿತಾ ಮೃತಪಟ್ಟ ಸಮಯ ಸರಿಯಿಲ್ಲ. ಅಪಶಕುನ ಇದೆ. ಮೂರು ತಿಂಗಳ ಕಾಲ ನೀನು ಮನೆಗೆ ಬರುವುದು ಬೇಡ ಎಂದು ಪ್ರವೀಣ್ ಅವರನ್ನು ನಿಮಿತಾ ಕುಟುಂಬಸ್ಥರು ಬೇರೆಡೆ ಕಳುಹಿಸಿದ್ದಾರೆ.
ಆದರೆ, ಪ್ರವೀಣ್ ಒಂದು ತಿಂಗಳು ಆಗುವಷ್ಟರಲ್ಲಿ ಮನೆಗೆ ಮರಳಿದ್ದಾರೆ. ಮನೆಗೆ ಬಂದು ನೋಡಿದಾಗ, ಪ್ರವೀಣ್ ಗೆ ಆಘಾತ ಕಾದಿತ್ತು. ಮನೆಯಲ್ಲಿದ್ದ ಆರು ಲಕ್ಷ ರೂ. ಮೌಲ್ಯದ ಪತ್ನಿಯ ಚಿನ್ನಾಭರಣ ಹಾಗೂ ಮೂರು ಲಕ್ಷ ರೂ. ನಗದು, ಕಾರನ್ನು ಸಂಬಂಧಿಕರು ದೋಚಿದ್ದು ಕಂಡುಬಂದಿದೆ. ಪತ್ನಿಯ ಬಾವ ಶಿವಪ್ಪ ಹಾಗೂ ಆಕೆಯ ಸೋದರಿಯರಾದ ಪ್ರೀತಿ, ಮಮತಾ, ಪಪ್ಪಚ್ಚಿ ಸೇರಿ ಚಿನ್ನಾಭರಣವನ್ನು ದೋಚಿದ್ದಾರೆ ಎಂದು ಪ್ರವೀಣ್ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಸಂಬಂಧ ಆರ್.ಆರ್. ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ಬದಲು ಎನ್ಸಿಆರ್ ದಾಖಲಿಸಿ ರಾಜಿಯಲ್ಲಿ ಮುಗಿಸಲು ನೋಡಿದ್ದಾರೆ. ದೂರಿನ ಬಗ್ಗೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸದೇ ಆರೋಪಿಗಳ ಪರ ವಕಾಲತ್ತು ವಹಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದೆ.
Bangalore Family loots Gold cash and car from Man who lost his wife due to Covid. A case has been registered at the R R Nagar Police Station.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm