ಬ್ರೇಕಿಂಗ್ ನ್ಯೂಸ್
24-06-21 01:28 pm Headline Karnataka News Network ಕ್ರೈಂ
Photo credits : ANI @ ANI
ಮುಂಬೈ, ಜೂನ್ 24: ಮುಂಬೈ ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ದಾವೂದ್ ಇಬ್ರಾಹಿಂ ಸೋದರ ಇಕ್ಬಾಲ್ ಕಸ್ಕರ್ನನ್ನು ಮುಂಬೈ ಪೊಲೀಸರು ಡ್ರಗ್ಸ್ ಕೇಸಲ್ಲಿ ಬಂಧಿಸಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವು ಮತ್ತು ಡ್ರಗ್ಸ್ ಪ್ರಕರಣದಲ್ಲಿ ಡ್ರಗ್ಸ್ ಪೆಡ್ಲರ್ ಜೊತೆ ಸಂಪರ್ಕ ಹೊಂದಿದ್ದ ಆರೋಪದಲ್ಲಿ ಇಕ್ಬಾಲ್ ಬಂಧಿಸಲಾಗಿದೆ.
ಮಾದಕ ದ್ರವ್ಯ ನಿಗ್ರಹ ದಳ(ಎನ್ಸಿಬಿ) ಪೊಲೀಸರು ಆರೋಪಿಯನ್ನು ಥಾಣೆಯಲ್ಲಿ ಬಂಧಿಸಿದ್ದಾರೆ. ನಂತರ ಎನ್ ಸಿಬಿ ಅಧಿಕಾರಿಗಳು ಬಲ್ಲಾರ್ಡ್ ಎಸ್ಟೇಟ್ ಕಚೇರಿಗೆ ಕರೆದೊಯ್ದು ವಿಚಾರಣೆ ನಡೆಸಿದ್ದಾರೆ.



15 ಕೆಜಿ ಹಶೀಶ್ ಹೊಂದಿದ್ದ ಕಾರಣಕ್ಕೆ ಕಸ್ಕರ್ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಆದರೆ, ಹೆಚ್ಚಿನ ಮಾಹಿತಿಯನ್ನು ಅಧಿಕಾರಿಗಳು ಹಂಚಿಕೊಂಡಿಲ್ಲ. ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ಸಂಪರ್ಕ ಹೊಂದಿರುವ ಪೆಡ್ಲರ್ ಪರ್ವೇಜ್ ಖಾನ್ ಅಲಿಯಾಸ್ ಚಿಂಕು ಹಾಗೂ ಡ್ರಗ್ ಪೆಡ್ಲರ್ ಹಾರೀಸ್ ಖಾನ್ ಮೂಲಕ ಡ್ರಗ್ಸ್ ದಂಧೆ ನಡೆಸಲಾಗುತ್ತಿತ್ತು.
ಅಲ್ಲದೆ, ಹಾರೀಸ್ ಖಾನ್ ಅಂಧೇರಿ, ಲೋಖಂಡವಾಲ, ಬಾಂದ್ರಾಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ಎಂದು ಪಿಟಿಐ ವರದಿ ಮಾಡಿದೆ. ಚಿಂಕು ಪಠಾಣ್ ಡ್ರಗ್ಸ್ ಕೇಸಿನಲ್ಲಿ ಹಾರೀಸ್ ಬಂಧನವಾಗಿದ್ದು, ಆತ ನೀಡಿದ್ದ ಸುಳಿವಿನ ಮೇರೆಗೆ ದಾವೂದ್ ಸೋದರನಿಗೆ ಬಲೆ ಬೀಸಲಾಗಿತ್ತು. ಬಾಲಿವುಡ್ ಮಂದಿ ಜೊತೆಗೆ ಹಾರೀಸ್ ನಿಕಟ ಸಂಪರ್ಕ ಹೊಂದಿದ್ದಲ್ಲದೆ, ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲೂ ಹೆಸರು ಕೇಳಿಬಂದಿತ್ತು.
Notorious underworld don and global terrorist Dawood Ibrahim’s younger brother Iqbal Kaskar was arrested by the Narcotics Control Bureau (NCB). Kaskar is accused of running the operations of Dawood Ibrahim in Mumbai for the past couple of decades.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm