ಬ್ರೇಕಿಂಗ್ ನ್ಯೂಸ್
24-06-21 02:00 pm Headline Karnataka News Network ಕ್ರೈಂ
ಬೆಂಗಳೂರು, ಜೂನ್ 24:ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬನಿಗೆ ಗಾಳಿಪಟ ದಾರ ಸಿಕ್ಕಿಕೊಂಡು ಕತ್ತು ಸೀಳಿರುವ ಘಟನೆ ಆಡುಗೋಡಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಈ ಕುರಿತು ಆಸ್ಪತ್ರೆಯಿಂದ ವಿಡಿಯೋ ಮಾಡುವ ಮೂಲಕ ಯುವಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದಾರೆ. ಇನ್ನೇನು ಕುತ್ತಿಗೆ ಸೀಳಿ ತಲೆ ಬೇರ್ಪಡಬೇಕಿತ್ತು. ಚಾಣಾಕ್ಷತೆ ಮೆರೆದು ಜೀವ ಉಳಿಸಿಕೊಂಡಿದ್ದಾರೆ. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ವೇಳೆ ವಿಡಿಯೋ ಮಾಡಿದ್ದು, ಎಲ್ಲರಿಗೂ ನಮಸ್ಕಾರ, ನಾನು ಪಂಜಾಬ್ ನ್ಯಾಷನಲ್ ಬ್ಯಾಂಕ್ಗೆ ಹೋಗುತ್ತಿದ್ದೆ. ಆಡುಗೋಡಿ ಪೊಲೀಸ್ ಠಾಣೆ ಮುಂದೆ ಹೋಗುತ್ತಿದ್ದೆ. ಗಾಳಿಪಟದ ದಾರವೊಂದು ಕುತ್ತಿಗೆಗೆ ಸಿಕ್ಕಿದೆ. ಕೂಡಲೇ ಎಚ್ಚೆತ್ತು ಕೈಯಿನಿಂದ ದಾರವನ್ನು ಎಳೆದೆ. ಅದರಿಂದ ನನ್ನ ಎರಡೂ ಬೆರಳು ತುಂಡಾಗುವಷ್ಟು ದಾರ ಕತ್ತರಿಸಿದೆ. ನಾನು ಸರ್ಕಾರಿ ಅಧಿಕಾರಿಗಳಲ್ಲಿ ಮನವಿ ಮಾಡಿಕೊಳ್ಳುವುದು ಇಷ್ಟೇ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ. ಎಷ್ಟೋ ಪಕ್ಷಿಗಳು ಜೀವ ಕಳೆದುಕೊಳ್ಳುತ್ತಿವೆ. ಇದರ ಜತೆಗೆ ಇದೀಗ ಜನರು ಜೀವ ಕಳೆದುಕೊಳ್ಳುವಂತಾಗಿದೆ. ನಾನು ಸ್ವಲ್ಪ ಯಾಮಾರಿದ್ದರೆ ನನ್ನ ರುಂಡ ನೋಡಬೇಕಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿ ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧ ಮಾಡಿ ಎಂದು ಆತ ಮನವಿ ಮಾಡಿಕೊಂಡಿದ್ದಾನೆ. ಅಂದಹಾಗೆ ಈ ವ್ಯಕ್ತಿಯ ವಿವರ ಬಹಿರಂಗ ಪಡಿಸಿಲ್ಲ. ಆದರೆ ಈತ ಮಾಡಿರುವ ವಿಡಿಯೋ ಮಾತ್ರ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಆಗಿದೆ.
ಬೆಂಗಳೂರಿನಲ್ಲಿ ಗಾಳಿಪಟದ ದಾರಗಳು ಪಕ್ಷಿಗಳ ಜೀವಕ್ಕೂ ಅಪಾಯ ತಂದೊಡ್ಡಿವೆ. ಇತ್ತೀಚೆಗೆ ದಾರಕ್ಕೆ ನವಿಲು ಸಿಲುಕಿ ಮೂರು ದಿನ ಒದ್ದಾಡಿತ್ತು. ಬಳಿಕ ವನ್ಯ ಜೀವಿ ಸಂರಕ್ಷಕರು ಅದನ್ನು ರಕ್ಷಿಸಿದ್ದರು. ಅನೇಕ ಹದ್ದುಗಳು ಬೆಂಗಳೂರಿನಲ್ಲಿ ಜೀವ ಕಳೆದುಕೊಂಡಿವೆ. ಪಾರಿವಾಳಗಳೂ ಕೂಡ ಗಾಳಿಪಟ ದಾರಕ್ಕೆ ಸಿಲುಕಿ ಒದ್ದಾಡಿ ಜೀವ ಕಳೆದುಕೊಂಡಿವೆ. ಬೆಂಗಳೂರಿನಲ್ಲಿ ಗಾಳಿಪಟ ಹಾರಿಸುವುದನ್ನು ನಿಷೇಧಿಸುವ ನಿಟ್ಟಿನಲ್ಲಿ ಬಿಬಿಎಂಪಿ ಅಧಿಕಾರಿಗಳು ಚಿಂತನೆ ಮಾಡಬೇಕಿದೆ.
A Two-wheeler rider was seriously injured when his neck was cut by a thread used to fly kites. The incident took place in Bangalore. The video of this has gone viral on social media.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm