ಬ್ರೇಕಿಂಗ್ ನ್ಯೂಸ್
26-06-21 05:36 pm Mangalore Correspondent ಕ್ರೈಂ
ಉಡುಪಿ, ಜೂನ್ 26: ಇಲ್ಲಿನ ಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಟ್ರಕ್ ಚಾಲಕನಿಗೆ ಅಲ್ಲಿನ ಸಿಬಂದಿಯೇ ಸೇರಿ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ. ಇದನ್ನು ಸೈಕ್ಲಿಸ್ಟ್ ಆಗಿರುವ ವ್ಯಕ್ತಿಯೊಬ್ಬ ಮೊಬೈಲಿನಲ್ಲಿ ಚಿತ್ರೀಕರಿಸಿ, ಜಾಲತಾಣದಲ್ಲಿ ಹರಿಯಬಿಟ್ಟಿದ್ದಾನೆ.
ಯಾರು ವಿಡಿಯೋ ಚಿತ್ರೀಕರಣ ಮಾಡಿದ್ದಾರೆಂದು ತಿಳಿದುಬಂದಿಲ್ಲ. ಆದರೆ, ಆತ ಇಂಗ್ಲಿಷ್ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾನೆ. ನಾನು ಸೈಕಲ್ ನಲ್ಲಿ ಸಾಗುತ್ತಿದ್ದಾಗ, ಟೋಲ್ ಸಿಬಂದಿ ಲಾರಿ ಚಾಲಕನಿಗೆ ಹಲ್ಲೆ ನಡೆಸುತ್ತಿರುವುದು ಕಂಡುಬಂದಿದೆ. ಮೊಬೈಲಿನಲ್ಲಿ ವಿಡಿಯೋ ರೆಕಾರ್ಡ್ ಮಾಡಿದ್ದೇನೆ. ಆದರೆ, ಅಲ್ಲಿನ ಸಿಬಂದಿ ನನ್ನನ್ನು ಪ್ರಶ್ನೆ ಮಾಡಿದ್ದು, ಹಲ್ಲೆ ನಡೆಸಲು ಮುಂದಾಗಿದ್ದಾರೆ. ವಿಡಿಯೋ ಡಿಲೀಟ್ ಮಾಡುವಂತೆ ಹೇಳಿ ಧಮ್ಕಿ ಹಾಕಿದ್ದಾರೆ. ಇಲ್ಲದಿದ್ದರೆ ಸೈಕಲ್ ಕೊಡುವುದಿಲ್ಲ ಎಂದು ಹೇಳಿ, ಸೈಕಲನ್ನು ತೆಗೆದಿಟ್ಟಿದ್ದರು.




ಅಲ್ಲಿಯೇ ಸ್ವಲ್ಪ ದೂರದಲ್ಲಿ ಹೊಯ್ಸಳ ಪೊಲೀಸರು ನಿಂತುಕೊಂಡಿದ್ದರು. ನಮ್ಮ ಜಗಳವನ್ನು ನೋಡಿ, ಪೊಲೀಸರು ಅಲ್ಲಿಗೆ ಬಂದಿದ್ದು ನಾನು ಅವರಿಗೆ ಘಟನೆಯನ್ನು ವಿವರಿಸಿದ್ದೇನೆ. ಅಲ್ಲದೆ, ನಾನೊಬ್ಬ ಮಾಧ್ಯಮದ ವ್ಯಕ್ತಿಯೆಂದು ಹೇಳಿದರೂ, ಪೊಲೀಸರು ಸಹಾಯಕ್ಕೆ ಬರಲಿಲ್ಲ. ಪೊಲೀಸರ ಎದುರಲ್ಲೇ ನನಗೆ ಟೋಲ್ ಸಿಬಂದಿ, ನೀನು ಎಲ್ಲಿ ಬೇಕಾದ್ರೂ ಕಂಪ್ಲೇಂಟ್ ಮಾಡು. ಏನೂ ಆಗುವುದಿಲ್ಲ ಎಂದು ಆವಾಜ್ ಹಾಕಿದ್ದಾಗಿ ಬರೆದುಕೊಂಡಿದ್ದಾನೆ. ಅಲ್ಲದೆ, ಟೋಲ್ ಸಿಬಂದಿ ಯಾರು ಕೂಡ ಮಾಸ್ಕ್ ಧರಿಸಿರಲಿಲ್ಲ. ಉಡುಪಿ ಜಿಲ್ಲಾಧಿಕಾರಿ ಈ ಬಗ್ಗೆ ಕ್ರಮ ಜರುಗಿಸುತ್ತಾರೆಯೇ ಎಂದು ಪ್ರಶ್ನೆ ಮಾಡಿದ್ದಾನೆ. ಆದರೆ, ಈ ವಿಡಿಯೋ ಮಾಡಿದ್ದು ಯಾರೆಂದು ಗೊತ್ತಾಗಿಲ್ಲ. ವಿಡಿಯೋದಲ್ಲಿ ಟ್ರಕ್ ಚಾಲಕನಿಗೆ ಹಲ್ಲೆ ನಡೆಸುವುದು ದಾಖಲಾಗಿದೆ. ವಿಡಿಯೋ ಆಧರಿಸಿ, ಪೊಲೀಸರು ಸುಮೊಟೋ ಕೇಸು ದಾಖಲಿಸಿ ಟೋಲ್ ಸಿಬಂದಿಯ ಮೇಲೆ ಕ್ರಮ ಜರುಗಿಸಬಹುದು.
Video:
Udupi Hejamadi toll gate staffs assault truck driver over tag issue video goes viralಹೆಜಮಾಡಿ ಟೋಲ್ ಪ್ಲಾಜಾದಲ್ಲಿ ಸಿಬಂದಿಯ ಗೂಂಡಾಗಿರಿ ; ಲಾರಿ ಚಾಲಕನಿಗೆ ಹಲ್ಲೆ ವಿಡಿಯೋ ವೈರಲ್
Posted by Headline Karnataka on Saturday, June 26, 2021
Udupi Hejamadi toll gate staffs assault truck driver over tag issue video goes viral. A cyclist who was said to be recording the video also was threatened by the staff for shooting the video.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm