ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.
ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
01-08-25 09:09 pm
Bangalore Correspondent
Rape Case, Prajwal Revanna Verdict : ಮೈಸೂರಿನ...
01-08-25 02:55 pm
ಧರ್ಮ 'ಸ್ಥಳ' ಕೇಸ್ ; ಪಾಯಿಂಟ್ ನಂ.1ರಲ್ಲಿ ಸಿಕ್ಕ...
01-08-25 01:31 pm
ಕೆಆರ್ ಐಡಿಎಲ್ ನಿಗಮವನ್ನೇ ಗುಡಿಸಿ ಹಾಕಿದ ಗುಮಾಸ್ತ !...
01-08-25 11:47 am
ಪಾಕಿಸ್ತಾನದಿಂದಲೇ ಭಾರತವನ್ನು ಸ್ಫೋಟಿಸುತ್ತೇನೆ ! ಗೋ...
31-07-25 11:20 pm
01-08-25 11:44 am
HK News Desk
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
ಪಾಕಿಸ್ತಾನದ ಡಿಜಿಎಂಒ ಕರೆ ಮಾಡಿ ದಾಳಿ ನಿಲ್ಲಿಸಲು ಮನ...
30-07-25 09:06 am
ಜಾರ್ಖಂಡ್ ನಲ್ಲಿ ಭೀಕರ ರಸ್ತೆ ಅಪಘಾತ ; ಸಿಲಿಂಡರ್...
29-07-25 11:58 am
01-08-25 11:45 am
Mangalore Correspondent
ಬಂಟ್ವಾಳ ಪಿಎಸ್ಐ ಕೀರಪ್ಪ ಕಾಂಬಳೆ ಆತ್ಮಹತ್ಯೆ ಪ್ರಕರಣ...
31-07-25 11:16 pm
MCC Bank to Inaugurate 20th Branch in Byndoor...
31-07-25 10:14 pm
KMC Hospital Attavar Trains Armed Forces Doct...
31-07-25 09:14 pm
Mangalore KMC Attavar, Workshop: ಅತ್ತಾವರ ಕೆಎಂ...
31-07-25 09:05 pm
01-08-25 05:05 pm
Mangalore Correspondent
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm
Tumakuru Crime, Principal Arrest: ತುಮಕೂರು ; ಹ...
01-08-25 02:31 pm
Mangalore Crime, Police: ಅಪ್ರಾಪ್ತ ಬಾಲಕಿಯನ್ನು...
31-07-25 06:04 pm
Bangalore Cyber Fraud: ಉದ್ಯೋಗಿಯನ್ನ ನಂಬಿ ಲ್ಯಾಪ...
30-07-25 10:42 pm