ಬ್ರೇಕಿಂಗ್ ನ್ಯೂಸ್
01-09-20 01:34 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 1: ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿ ಗುರುತಿಸಲ್ಪಟ್ಟಿರುವ ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ಈಗ ಡ್ರಗ್ಸ್ ಜಾಲದಲ್ಲಿ ಸಿಲುಕಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವ ಎನ್ ಸಿಬಿ ಅಧಿಕಾರಿಗಳು ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
ಈಗಾಗ್ಲೇ ಹಲವು ದಿನಗಳಿಂದ ಸುಶಾಂತ್ ಸಾವಿನ ಪ್ರಕರಣದಲ್ಲಿ ರಿಯಾ ಚಕ್ರವರ್ತಿ ಸಿಬಿಐ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ. ಇದರ ನಡುವೆ ಆಕೆಗೆ ಹೊಸ ತಲೆನೋವು ಶುರುವಾಗಿದ್ದು ಡ್ರಗ್ಸ್ ಜಾಲದಲ್ಲೂ ವಿಚಾರಣೆ ಎದುರಿಸುವಂತಾಗಿದೆ. ಇತ್ತ ಕರ್ನಾಟಕದಲ್ಲಿ ಡ್ರಗ್ಸ್ ಜಾಲದಲ್ಲಿ ಸ್ಯಾಂಡಲ್ ವುಡ್ ನಂಟು ಬಹಿರಂಗ ಆಗಿರುವಾಗಲೇ ಬಾಲಿವುಡ್ ಅಂಗಳದಲ್ಲಿಯೂ ಡ್ರಗ್ಸ್ ಜಾಲದ ಬಗ್ಗೆ ತನಿಖೆ ಶುರುವಾಗಿದ್ದು ವಿಶೇಷ.

ಈ ಹಿಂದೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ತನಿಖೆಯಲ್ಲಿ ರಿಯಾ ವಾಟ್ಸಪ್ ಸಂದೇಶಗಳು, ಡ್ರಗ್ಸ್ ಕುರಿತಂತೆ ರಿಯಾ ಮೆಸೇಜ್ ಮಾಡಿರುವುದು ತಿಳಿದುಬಂದಿತ್ತು. ಡಾರ್ಕ್ ನೆಟ್ ವೆಬ್ ಸೈಟಿನಲ್ಲಿ ರಿಯಾ ಖಾಸಗಿಯಾಗಿ ಸಂಪರ್ಕ ಹೊಂದಿದ್ದುದೂ ಪತ್ತೆಯಾಗಿತ್ತು. ಈ ಮಾಹಿತಿ ಆಧರಿಸಿ, ಮಾದಕ ವಸ್ತು ನಿಯಂತ್ರಣ ಬ್ಯೂರೋ ತನಿಖೆ ಆರಂಭಿಸಿತ್ತು. ಪ್ರಾಥಮಿಕ ಮಾಹಿತಿ ಕಲೆಹಾಕಿರುವ ಅಧಿಕಾರಿಗಳು ಈಗ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.
ಇದೇ ವೇಳೆ, ಸಿಬಿಐ ಅಧಿಕಾರಿಗಳು ಸುಶಾಂತ್ ಸ್ನೇಹಿತರು ಮತ್ತು ಮ್ಯಾನೇಜರ್ಗಳನ್ನೂ ತನಿಖೆಗೆ ಒಳಪಡಿಸುತ್ತಿದ್ದಾರೆ. ಸುಶಾಂತ್ ಜೊತೆಗಿದ್ದ ಸಿದ್ಧಾರ್ಥ್ ಪಿಟಾನಿ, ಮ್ಯಾನೇಜರ್ ಶ್ರುತಿ ಮೋದಿ, ಸ್ಯಾಮ್ಯುವೆಲ್ ಮಿರಾಂಡ, ಅಕೌಂಟೆಂಟ್ ರಜತ್ ಮೇವಾಟಿ, ಮನೆ ಕೆಲಸದವರನ್ನೂ ಅಧಿಕಾರಿಗಳು ವಿಚಾರಣೆಗೆ ನಡೆಸುತ್ತಿದ್ದಾರೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm