ಬ್ರೇಕಿಂಗ್ ನ್ಯೂಸ್
29-06-21 04:56 pm Bangalore Correspondent ಕ್ರೈಂ
ಬೆಂಗಳೂರು, ಜೂ. 29: ನಿವೃತ್ತ ಐಎಎಸ್ ಅಧಿಕಾರಿಯೊಬ್ಬರಿಗೆ ಮನೆ ಕೆಲಸಗಾರನೇ ಮೋಸ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕೆಲಸಗಾರ ಐಎಎಸ್ ಅಧಿಕಾರಿಯ ಚೆಕ್ಗಳನ್ನು ಕದ್ದು ಹದಿನಾಲ್ಕು ಲಕ್ಷ ರೂ. ಲಪಟಾಯಿಸಿ ಪರಾರಿಯಾಗಿದ್ದಾನೆ.

ಹೌದು ಇದು ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರ ಕಥೆ. ಕೋರಮಂಗಲದಲ್ಲಿ ನೆಲೆಸಿರುವ ನಿವೃತ್ತ ಐಎಎಸ್ ಅಧಿಕಾರಿ ವಿಜಯ್ ಅವರು ಸೆಕ್ಯುರಿಟಿ ಏಜೆನ್ಸಿ ಮೂಲಕ ಕಾಸಿಂ ಸಾಬ್ ಎಂಬ ಕೆಲಸಗಾರನ್ನು ಮನೆ ಕೆಲಸಕ್ಕೆ ನೇಮಿಸಿಕೊಂಡಿದ್ದರು. ಸ್ವಂತ ಮಗನಂತೆ ಬಿಂಬಿಸಿಕೊಂಡಿದ್ದ ಕಾಸಿಂಸಾಬ್ಗೆ ಸಂಬಳ ಜತೆಗೆ ಹೆಚ್ಚುವರಿ ಹಣ ಕೂಡ ನೀಡುತ್ತಿದ್ದರು. ವಿಜಯ್ ಅವರಿಗೆ ಹಣ ಬೇಕೆಂದಾಗ ಕಾಸಿಂ ಸಾಬ್ ತಂದು ಕೊಡುತ್ತಿದ್ದ. ಕಾಸಿಂ ಸಾಬ್ನನ್ನು ವಿಜಯ್ ಕೂಡ ನಂಬಿದ್ದರು.
ಇತ್ತೀಚೆಗೆ ತನ್ನ ಅಣ್ಣನ ಮದುವೆಗೆಂದು ಊರಿಗೆ ಹೋಗಿರುವ ಕಾಸಿಂ ಸಾಬ್ ವಾಪಸು ಬಂದಿಲ್ಲ. ಒಂದು ವಾರ ಕಳೆದರೂ ವಾಪಸು ಬಂದಿಲ್ಲ. ಅನುಮಾನಗೊಂಡು ಸೆಕ್ಯುರಿಟಿ ಕಂಪನಿಯಲ್ಲಿ ವಿಚಾರಿಸಿದಾಗ ಆತ ಕೆಲಸ ಬಿಟ್ಟಿರುವ ವಿಷಯ ಗೊತ್ತಾಗಿದೆ. ಅನುಮಾನಗೊಂಡ ನಿವೃತ್ತ ಐಎಎಸ್ ಅಧಿಕಾರಿ ಬ್ಯಾಂಕ್ಗೆ ಹೋಗಿ ಪರಿಶೀಲನೆ ನಡೆಸಿದಾಗ ಬ್ಯಾಂಕ್ ನಲ್ಲಿದ್ದ ಹದಿನಾಲ್ಕು ಲಕ್ಷ ರೂ. ಹಣ ಲಪಟಾಯಿಸಿರುವುದು ಬೆಳಕಿಗ ಬಂದಿದ್ದು, ಕೋರಮಂಗಲ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
House Maid runs aways with 14 Lakhs Cheque from Retired DC house in Bangalore. A case has been registered at the Koramangala Police Station.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm