ಬ್ರೇಕಿಂಗ್ ನ್ಯೂಸ್
30-06-21 04:15 pm Headline Karnataka News Network ಕ್ರೈಂ
Photo credits : ANI @ ANI
ಭುವನೇಶ್ವರ್, ಜೂನ್ 30: ಪೋರ್ಜರಿ ದಾಖಲೆಗಳನ್ನು ಬಳಸ್ಕೊಂಡು ಲಕ್ಷಾಂತರ ಸಿಮ್ ಕಾರ್ಡ್ ಏಕ್ಟಿವೇಟ್ ಮಾಡಿ ಕ್ರಿಮಿನಲ್ ಚಟುವಟಿಕೆಗೆ ಪೂರೈಕೆ ಮಾಡುತ್ತಿದ್ದ ಜಾಲವನ್ನು ಪೊಲೀಸರು ಭೇದಿಸಿದ್ದು ಖಾಸಗಿ ಟೆಲಿಕಾಂ ಕಂಪನಿಯ ಏಳು ಮಂದಿಯನ್ನು ಬಂಧಿಸಿದ್ದಾರೆ.
ಜಾಲಕ್ಕೆ ಸಂಬಂಧಿಸಿ 16,147 ಏಕ್ಟಿವ್ ಸಿಮ್ ಕಾರ್ಡ್ ಹಾಗೂ 110 ಮೊಬೈಲ್ ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳನ್ನು ಮಹೇಶ್ವರ್ ಬಾರಿಕ್(38), ರಜನಿಜಾಂತ ಪಾಣಿಗ್ರಹಿ(30), ಸುಬ್ರತ್ ಕುಮಾರ್ ಪಾಣಿಗ್ರಹಿ(24), ಸುಕಾಂತ ಕುಮಾರ್ ದಾಸ್ (30), ಸ್ರೀನಿಬಾಶ್ ಘಡಾಯಿ(21), ರಾಜೇಶ್ ಕುಮಾರ್ ಸೇಥಿ (29), ಮಂಗಲಮಾಯ ಮಿಶ್ರಾ (27) ಎಂದು ಗುರುತಿಸಲಾಗಿದೆ.


ಸಿಮ್ ಪಡೆಯಲು ಬರುವ ಅಸಲಿ ಗ್ರಾಹಕರದ್ದೇ ಐಡಿ ದಾಖಲೆ ಪ್ರತಿಗಳನ್ನು ಮತ್ತು ಫೋಟೊಗಳನ್ನು ಪೋರ್ಜರಿ ಮಾಡಿ ನಕಲಿಯಾಗಿ ಸಿಮ್ ಕಾರ್ಡ್ ತಯಾರಿಸುತ್ತಿದ್ದರು. ಲಕ್ಷಾಂತರ ಸಿಮ್ ಕಾರ್ಡ್ ಗಳನ್ನು ನಕಲಿ ಜಾಲದಲ್ಲಿ ಏಕ್ಟಿವೇಟ್ ಮಾಡಿ, ಅವುಗಳನ್ನು ವ್ಯವಸ್ಥಿತವಾಗಿ ಒಡಿಶಾ ಹೊರಭಾಗಕ್ಕೆ ಮಾರಾಟ ಮಾಡಲಾಗುತ್ತಿತ್ತು.
ಒಡಿಶಾ ಹೊರಭಾಗಕ್ಕೆ ಯಾವುದೇ ವಿಳಾಸ ದಾಖಲೆ ಪಡೆಯದೆ ಸಿಮ್ ಗಳನ್ನು ಮಾರಾಟ ಮಾಡುತ್ತಿದ್ದರು. ಹೀಗಾಗಿ ಸಿಮ್ ಪಡೆದವರನ್ನು ಟ್ರೇಸ್ ಮಾಡುವುದು ಸಾಧ್ಯವಿಲ್ಲ. ನಕಲಿ ಸಿಮ್ ಬಳಸಿಕೊಂಡು ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿದ್ದಾರೆ ಎಂದು ಪೊಲೀಸರು ಅಭಿಪ್ರಾಯ ಪಟ್ಟಿದ್ದಾರೆ.
ಈ ಗ್ಯಾಂಗ್ ಎರಡು ಲಕ್ಷಕ್ಕೂ ಹೆಚ್ಚು ನಕಲಿ ಸಿಮ್ ಗಳನ್ನು ಮಾರಾಟ ಮಾಡಿರುವ ಅಂದಾಜಿದೆ. ದೇಶದ ಭದ್ರತೆಗೆ ಇದೊಂದು ಅಪಾಯಕಾರಿ ಆಗಬಲ್ಲ ನಡೆಯಾಗಿದ್ದು ನಕಲಿ ಸಿಮ್ ಬಳಸಿ ಭದ್ರತೆಗೆ ಸವಾಲಾಗುವ ರೀತಿಯ ಅಪರಾಧ ಕೃತ್ಯಗಳನ್ನು ಎಸಗುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Commissioner of Police, Bhubaneswar-Cuttack, S K Priyadarsi said the pre-activated SIMs were sold outside the state.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm