ಬ್ರೇಕಿಂಗ್ ನ್ಯೂಸ್
01-07-21 12:55 pm Headline Karnataka News Network ಕ್ರೈಂ
ಚಿಕ್ಕಮಗಳೂರು, ಜುಲೈ 01: ಮೂರೇ ಮೂರು ತಿಂಗಳ ಹಿಂದೆ ಹಸೆಮಣೆ ಏರಿದ್ದವಳು ಇಂದು ಶವವಾಗಿ ಪತ್ತೆಯಾಗಿದ್ದಾಳೆ.
ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡಿ ತಮ್ಮ ಮಗಳಿಗೆ ಮದುವೆ ಮಾಡಿಸಿದ್ರು ಅದು ಪ್ರಯೋಜನವಾಗಿಲ್ಲ, ಯಾಕಂದರೆ ತನ್ನ ಗಂಡ ಇನ್ನೊಬ್ಬಳ ಒಟ್ಟಿಗೆ ಸಂಬಂಧ ಬೆಳೆಸಿಕೊಂಡಿದ್ದ. ಅದನ್ನು ಪ್ರಶ್ನಿಸಿದ್ದಕ್ಕೆ ಹೆಂಡತಿ ಸ್ಮಶಾನ ಸೇರಿದ್ದಾಳೆ.
ಕಟ್ಟಿಕೊಂಡ ಗಂಡನ ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದೇ ಆಕೆಗೆ ಜೀವಕ್ಕೆ ಮುಳುವಾಗಿದೆ. ಮನೆ ಮುಂದಿನ ನೀರಿನ ತೊಟ್ಟಿಯೇ ಜೀವಕ್ಕೆ ಉರುಳಾಗಿದೆ. ಮಗಳಿಗೆ ಯಾವುದಕ್ಕೂ ಕೊರತೆಯಾಗಬಾರದೆಂದು ಮನೆ ಮಾರಿ ಮದುವೆ ಮಾಡಿಕೊಟ್ಟಿದ್ದ ಹೆತ್ತವರ ಆಕ್ರಂದನ ಮುಗಿಲು ಮುಟ್ಟಿತ್ತು.
ಹಾಸನ ಜಿಲ್ಲೆ ಬೇಲೂರಿನ ಸೀಮ್ರಾನಾ ಬಾನು ಮೂರು ತಿಂಗಳ ಹಿಂದಷ್ಟೆ ಚಿಕ್ಕಮಗಳೂರಿನ ಫೈರೋಜ್ ಎಂಬುವವನ ಜೊತೆ ವಿವಾಹವಾಗಿದ್ದರು. 3 ತಿಂಗಳು ಕಳೆಯುವಷ್ಟರಲ್ಲಿ ಹೆಣವಾಗಿದ್ದಾಳೆ. ಗಂಡನ ಮನೆಯ ನೀರಿನ ಸಂಪ್ನಲ್ಲಿ ಸಿಮ್ರಾನ್ ಮೃತದೇಹ ಸಿಕ್ಕಿದೆ.
ಬೆಳಗ್ಗೆಯಿಂದ ಸಿಮ್ರಾನ್ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಗಂಡನ ಮನೆಯವರು ಮನೆಯಲ್ಲಿ ಇಲ್ಲ, ಬುರ್ಖಾನೂ ಇಲ್ಲ ಎಂದು ಹೇಳಿದ್ದಾರೆ. ಎಲ್ಲಾ ಕಡೆ ವಿಚಾರಿಸಿ ಅನುಮಾನಗೊಂಡು ಸಿಮ್ರಾನ್ ಗಂಡನ ಮನೆ ಬಳಿ ಹುಡುಕುತ್ತಿದ್ದಾಗ ಸಂಪ್ ಒಳಗೆ ಮೃತದೇಹ ಇರುವುದು ಪತ್ತೆಯಾಗಿದೆ.

ಆಕೆಯ ಶವವನ್ನು ನೋಡಿದ ಪೋಷಕರು, ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಮನೆಯ ಬಳಿಯೇ ಆಕೆಯ ಶವ ಸಿಗುತ್ತಿದ್ದಂತೆ ಸಿಮ್ರಾನ್ ಪತಿ ಫೈರೋಜ್ ಹಾಗೂ ಅವರ ಮನೆಯವರು ಪೇಚಿಗೆ ಸಿಲುಕಿದ್ದಾರೆ. ಸಂಪ್ ಒಳಗೆ ಗೃಹಿಣಿಯ ಮೃತದೇಹ ಸಿಕ್ಕುತ್ತಿದ್ದಂತೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಫೈರೋಜ್ ಹಾಗೂ ಆತನ ತಾಯಿ, ತಂದೆಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಮದುವೆಯಾದ ಕೆಲವೇ ದಿನಗಳಲ್ಲಿ ತನ್ನ ಅಸಲಿ ಬುದ್ಧಿ ತೋರಿಸಿದ್ದ ಫೈರೋಜ್. ಕೊಟ್ಟಿರೋ ದುಡ್ಡು, ಚಿನ್ನ ಸಾಕಾಗಿಲ್ಲ ಇನ್ನೂ ಬೇಕು ಅಂತ ಪೀಡಿಸುತ್ತಿದ್ದನಂತೆ. ಅಲ್ಲದೇ ಬೇರೆ ಹುಡುಗಿಯರ ಜೊತೆ ಸಂಬಂಧ ಕೂಡ ಇಟ್ಟುಕೊಂಡಿದ್ದ.
ಇದನ್ನ ಪ್ರಶ್ನೆ ಮಾಡಿದ್ದ ಪತ್ನಿ ಜೊತೆ ಗಲಾಟೆ ಮಾಡಿದ್ದ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ. ಇತ್ತೀಚಿಗೆ ಮನೆಗೆ ಬರೋದು ತಡವಾಗುತ್ತಿದ್ದಿದ್ದನ್ನು ಪ್ರಶ್ನೆ ಮಾಡಿದ್ದ ಪತ್ನಿ ಸಿಮ್ರಾನ್ಳನ್ನ ಪತಿ ಫೈರೋಜ್, ಅತ್ತೆ, ಮಾವ, ನಾದಿನಿ ಎಲ್ಲಾ ಸೇರಿ ಕೊಲೆ ಮಾಡಿದ್ದಾರೆ ಅಂತಾ ಮೃತ ಸಿಮ್ರಾನ್ ಸಂಬಂಧಿಕರು ಆರೋಪಿಸಿದ್ದಾರೆ.
ಒಟ್ಟಾರೆ, ಇದ್ದ ಮನೆಯನ್ನು ಮಾರಿ ಮಗಳ ಮದುವೆ ಮಾಡಿದ್ದ ಪೋಷಕರು ಈಗ ಕಣ್ಣೀರು ಹಾಕುತ್ತಿದ್ದಾರೆ. ನಾಲ್ಕು ದಿನಗಳ ಹಿಂದಷ್ಟೆ ಹುಟ್ಟುಹಬ್ಬ ಆಚರಿಸಿಕೊಂಡು 22ನೇ ವರ್ಷಕ್ಕೆ ಸಿಮ್ರಾನ್ ಕಾಲಿಟ್ಟಿದ್ದಳು. ನಗು ನಗುತ್ತಾ ಗಂಡನ ಮನೆಯಲ್ಲಿ ಇರಬೇಕಾದ ಗೃಹಿಣಿ ಸಾವನ್ನಪ್ಪಿದ್ದಾಳೆ.
Chikmagalur's Wife found dead in water Sump after questioning her Husband's illicit affair. The couple had married just there months ago. The deceased has been identified as Simran Banu.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm