ಬ್ರೇಕಿಂಗ್ ನ್ಯೂಸ್
05-07-21 11:10 pm Mangaluru Correspondent ಕ್ರೈಂ
ಪುತ್ತೂರು, ಜುಲೈ 5: ಹೈಟೆಕ್ ಹನಿಟ್ರ್ಯಾಪ್ ಪ್ರಕರಣ ಸಂಬಂಧಿಸಿ ಪುತ್ತೂರು ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಸಂತ್ರಸ್ತ ಯುವಕನಿಂದ ಹಣ ಕಿತ್ತುಕೊಂಡಿದ್ದ ಪುತ್ತೂರಿನ ಮಹಮ್ಮದ್ ಶಾಫಿ (34), ಸವಣೂರಿನ ಅಜರುದ್ದೀನ್(38), ನಝೀರ್ (32) ಎಂಬವರನ್ನು ಬಂಧಿಸಲಾಗಿದೆ.
ನೆಟ್ಟಣಿಗೆ ಮುಡ್ನೂರಿನ ಅಬ್ದುಲ್ ನಾಸೀರ್ ಎಂಬಾತನಿಗೆ ಫೇಸ್ಬುಕ್ ನಲ್ಲಿ ಪರಿಚಯವಾಗಿದ್ದ ಯುವತಿ ವಿಡಿಯೋ ಕಾಲ್, ಚಾಟಿಂಗ್ ಮಾಡಿ ಹತ್ತಿರವಾಗಿದ್ದಳು. ಬಳಿಕ ವಿಡಿಯೋ ಕಾಲ್ ನಲ್ಲಿ ಅರೆ ನಗ್ನವಾಗಿ ತೋರಿಸುವಂತೆ ಹೇಳಿ, ಅದನ್ನು ರೆಕಾರ್ಡ್ ಮಾಡಿಕೊಂಡಿದ್ದಳು. ಯುವತಿಯ ಬಲೆಗೆ ಬಿದ್ದು ಆಕೆ ಹೇಳಿದಂತೆ ಕೇಳಿದ್ದ ಅಬ್ದುಲ್ ನಾಸೀರ್ ಹನಿಟ್ರ್ಯಾಪ್ ಒಳಗಾಗಿದ್ದ. ಬಳಿಕ ಆರೇಳು ಮಂದಿ ಯುವಕರು ಅಬ್ದುಲ್ ನಾಸಿರ್ ಹಿಂದೆ ಬಿದ್ದು ಹಣಕ್ಕಾಗಿ ಪೀಡಿಸಿದ್ದಾರೆ. 30 ಲಕ್ಷ ರೂ. ಹಣ ನೀಡದೇ ಇದ್ದರೆ ವಿಡಿಯೋವನ್ನು ಜಾಲತಾಣದಲ್ಲಿ ಹಾಕುವುದಾಗಿ ಹೇಳಿ, ಒತ್ತಡ ಹೇರಿದ್ದಾರೆ. ಅದರಂತೆ, ಮಾನಸಿಕ ಒತ್ತಡಕ್ಕೊಳಗಾದ ಅಬ್ದುಲ್ ನಾಸೀರ್ ಜಾಗ ಖರೀದಿಸಲೆಂದು ಕೂಡಿಟ್ಟಿದ್ದ 25 ಲಕ್ಷ ರೂ.ವನ್ನು ಆರೋಪಿಗಳಿಗೆ ಕೊಟ್ಟಿದ್ದ. ಆದರೆ, ಐದು ಲಕ್ಷ ಬಾಕಿ ಇರಿಸಿಕೊಂಡ ಹಣವನ್ನು ಪೀಕಿಸಿಕೊಳ್ಳಲು ನಜೀರ್ ಮತ್ತು ಅಜರ್ ಬಂದಿದ್ದು ಮತ್ತೆ ಅಬ್ದುಲ್ ನಾಸೀರ್ ನನ್ನು ಸತಾಯಿಸಿದ್ದಾರೆ.

ಇದರಿಂದ ಹಿಂಸೆಗೊಳಗಾಗಿದ್ದ ಅಬ್ದುಲ್ ನಾಸೀರ್ ಪುತ್ತೂರು ನಗರ ಠಾಣೆ ಪೊಲೀಸರಿಗೆ ತಿಳಿಸಿದ್ದ. ಪೊಲೀಸರು ಮೊದಲು ಯುವತಿಯನ್ನು ಬಂಧಿಸಿದ್ದು ಇಂದು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಒಟ್ಟು ಏಳು ಮಂದಿ ಆರೋಪಿಗಳ ಹೆಸರನ್ನು ಪೊಲೀಸರಿಗೆ ನೀಡಲಾಗಿತ್ತು. ಯುವತಿ ತನ್ನ ಹೆಸರನ್ನು ನತಾಶಾ ಎಂದು ಪರಿಚಯಿಸಿದ್ದಲ್ಲದೆ, ಕಾರ್ಕಳದವಳೆಂದು ಹೇಳಿ ಪ್ರೀತಿ ಪ್ರೇಮದ ನಾಟಕವಾಡಿದ್ದಳು. ಬಂಧನದ ಬಳಿಕ ಆಕೆ ಬಂಟ್ವಾಳದ ನಿವಾಸಿಯೆಂದು ತಿಳಿದುಬಂದಿತ್ತು.
ಆರೋಪಿಗಳ ಬಳಿಯಿಂದ ಏಳು ಲಕ್ಷ ರೂ. ನಗದು, ಒಂದು ಕಾರು, ಒಂದು ಆಟೋ ಮತ್ತು ಮೂರು ಮೊಬೈಲ್ ಗಳನ್ನು ವಶಕ್ಕೆ ಪಡೆಯಲಾಗಿದೆ.
ಸೋಶಿಯಲ್ ಮೀಡಿಯಾದಲ್ಲೇ ಹನಿಟ್ರ್ಯಾಪ್ ; ಲಕ್ಷಾಂತರ ಕಳಕೊಂಡ ಯುವಕ, ಬಲೆಗೆ ಬಿದ್ದ ಯುವತಿ !
Puttur Honey trap case three Absconding persons have been arrested by Police. Seven lakh cash, 5 lakh worth Car and 1 lakh worth Auto has been seized by the Police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm