ಬ್ರೇಕಿಂಗ್ ನ್ಯೂಸ್
08-07-21 03:21 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 8 : ಸಬ್ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ಹೇಳಿ ಆರು ಜನರಿಂದ ಒಂದು ಕೋಟಿ ರೂಪಾಯಿ ಲಂಚ ಪಡೆದು ವಂಚಿಸಿದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಎಂದು ಕೆಪಿಎಸ್ಸಿ ಹೆಸರು ಹೇಳಿಕೊಂಡು ನಂಬಿಸಿದ್ದ ಅರುಣ್ ಕುಮಾರ್ ಎಂಬಾತ ಬಂಧಿತ ವ್ಯಕ್ತಿ. ತಾನು ಪ್ರಭಾವಿ ವ್ಯಕ್ತಿಯೆಂದೂ, ಎಸ್ಐ ಹುದ್ದೆ ಕೊಡಿಸುವೆನೆಂದೂ ಹೇಳಿ ಲಂಚ ಪಡೆದಿದ್ದ. ಆತನನ್ನು ನಂಬಿದ್ದ ಆರು ಜನ ಒಟ್ಟು ಒಂದು ಕೋಟಿ ರೂಪಾಯಿ ನೀಡಿದ್ದರು.
ಈ ಬಗ್ಗೆ ಮೋಸ ಹೋದ ದಾವಣಗೆರೆಯ ಬಿ.ಜಯದೇವ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕೆ.ಹೆಚ್.ಅರುಣ್ ಕುಮಾರ್ ಮಾತನ್ನು ನಂಬಿ ಜಯದೇವ ಅವರ ಸ್ನೇಹಿತರಾದ ಲಕ್ಷ್ಮಪ್ಪ ಮತ್ತು ಚಂದ್ರಪ್ಪ ಎಂಬ ಇಬ್ಬರು ಎಸ್ಐ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತನಗೆ ಎಲ್ಲರ ಲಿಂಕ್ ಇದೆ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್, ಸ್ನೇಹಿತರಿಗೆ ಎಸ್ಐ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ 70 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ.

2020ನೇ ಇಸವಿಯ ಜನವರಿ 30ರಂದು 15 ಲಕ್ಷ ರೂ. ಹಣ ವರ್ಗಾವಣೆ ಮಾಡಿಸಿಕೊಂಡಿದ್ದ ಅರುಣ್ ಕುಮಾರ್, ಕೆಲ ದಿನಗಳ ನಂತರ ಮತ್ತೆ 20 ಲಕ್ಷ ರೂಪಾಯಿ ಹಣವನ್ನು ತರಿಸಿಕೊಂಡಿದ್ದ. ಇಷ್ಟು ಕೊಟ್ಟ ನಂತರವೂ ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಇದೇ ರೀತಿ ಒಟ್ಟು 6 ಜನರಿಗೆ ಮೋಸ ಮಾಡಿದ್ದ ಆತ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದಾನೆ ಎಂಬ ಆರೋಪಗಳಿವೆ.
ಈ ಬಗ್ಗೆ ದೂರು ದಾಖಲಿಸಿದ್ದ ದಾವಣಗೆರೆಯ ಬಿ.ಜಯದೇವ ಎನ್ನುವವರು ಅರುಣ್ ಕುಮಾರ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಅರುಣ್ ಕುಮಾರ್ನನ್ನು ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಆತನನ್ನು ವಿಧಾನಸೌಧ ಪೊಲೀಸರಿಗೆ ಹಸ್ತಾಂತರ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Bangalore CCB Police have succeeded in arresting a person who was cheating people of giving Sub Inspector Job in the Police department. The arrested has been identified as Arun Kumar.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm