ಬ್ರೇಕಿಂಗ್ ನ್ಯೂಸ್
08-07-21 03:21 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 8 : ಸಬ್ಇನ್ಸ್ಪೆಕ್ಟರ್ ಹುದ್ದೆ ಕೊಡಿಸುವುದಾಗಿ ಹೇಳಿ ಆರು ಜನರಿಂದ ಒಂದು ಕೋಟಿ ರೂಪಾಯಿ ಲಂಚ ಪಡೆದು ವಂಚಿಸಿದ ವ್ಯಕ್ತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯ ಎಂದು ಕೆಪಿಎಸ್ಸಿ ಹೆಸರು ಹೇಳಿಕೊಂಡು ನಂಬಿಸಿದ್ದ ಅರುಣ್ ಕುಮಾರ್ ಎಂಬಾತ ಬಂಧಿತ ವ್ಯಕ್ತಿ. ತಾನು ಪ್ರಭಾವಿ ವ್ಯಕ್ತಿಯೆಂದೂ, ಎಸ್ಐ ಹುದ್ದೆ ಕೊಡಿಸುವೆನೆಂದೂ ಹೇಳಿ ಲಂಚ ಪಡೆದಿದ್ದ. ಆತನನ್ನು ನಂಬಿದ್ದ ಆರು ಜನ ಒಟ್ಟು ಒಂದು ಕೋಟಿ ರೂಪಾಯಿ ನೀಡಿದ್ದರು.
ಈ ಬಗ್ಗೆ ಮೋಸ ಹೋದ ದಾವಣಗೆರೆಯ ಬಿ.ಜಯದೇವ ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಕೆ.ಹೆಚ್.ಅರುಣ್ ಕುಮಾರ್ ಮಾತನ್ನು ನಂಬಿ ಜಯದೇವ ಅವರ ಸ್ನೇಹಿತರಾದ ಲಕ್ಷ್ಮಪ್ಪ ಮತ್ತು ಚಂದ್ರಪ್ಪ ಎಂಬ ಇಬ್ಬರು ಎಸ್ಐ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ತನಗೆ ಎಲ್ಲರ ಲಿಂಕ್ ಇದೆ ಎಂದು ಹೇಳಿಕೊಂಡಿದ್ದ ಅರುಣ್ ಕುಮಾರ್, ಸ್ನೇಹಿತರಿಗೆ ಎಸ್ಐ ಹುದ್ದೆ ಕೊಡಿಸುತ್ತೇನೆ ಎಂದು ಹೇಳಿ 70 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ.

2020ನೇ ಇಸವಿಯ ಜನವರಿ 30ರಂದು 15 ಲಕ್ಷ ರೂ. ಹಣ ವರ್ಗಾವಣೆ ಮಾಡಿಸಿಕೊಂಡಿದ್ದ ಅರುಣ್ ಕುಮಾರ್, ಕೆಲ ದಿನಗಳ ನಂತರ ಮತ್ತೆ 20 ಲಕ್ಷ ರೂಪಾಯಿ ಹಣವನ್ನು ತರಿಸಿಕೊಂಡಿದ್ದ. ಇಷ್ಟು ಕೊಟ್ಟ ನಂತರವೂ ಮತ್ತೆ 10 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದ. ಇದೇ ರೀತಿ ಒಟ್ಟು 6 ಜನರಿಗೆ ಮೋಸ ಮಾಡಿದ್ದ ಆತ ಒಂದು ಕೋಟಿ ರೂಪಾಯಿಗೂ ಹೆಚ್ಚು ವಂಚಿಸಿದ್ದಾನೆ ಎಂಬ ಆರೋಪಗಳಿವೆ.
ಈ ಬಗ್ಗೆ ದೂರು ದಾಖಲಿಸಿದ್ದ ದಾವಣಗೆರೆಯ ಬಿ.ಜಯದೇವ ಎನ್ನುವವರು ಅರುಣ್ ಕುಮಾರ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಇದಕ್ಕೆ ಸಂಬಂಧಿಸಿ ವಿಧಾನಸೌಧ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿ ಅರುಣ್ ಕುಮಾರ್ನನ್ನು ಕೆಲವು ದಿನಗಳ ಹಿಂದೆ ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೀಗ ಆತನನ್ನು ವಿಧಾನಸೌಧ ಪೊಲೀಸರಿಗೆ ಹಸ್ತಾಂತರ ಮಾಡಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
The Bangalore CCB Police have succeeded in arresting a person who was cheating people of giving Sub Inspector Job in the Police department. The arrested has been identified as Arun Kumar.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm