ಬ್ರೇಕಿಂಗ್ ನ್ಯೂಸ್
09-07-21 05:40 pm Mangalore Correspondent ಕ್ರೈಂ
ಮಂಗಳೂರು, ಜುಲೈ 9: ಪಿಎಚ್ ಡಿ ವಿದ್ಯಾರ್ಥಿನಿಯೊಬ್ಬರ ಪ್ರಬಂಧ ಅಂಗೀಕಾರಕ್ಕಾಗಿ ಲಂಚ ಕೇಳಿದ ಆರೋಪದಲ್ಲಿ ಲೋಕಾಯುಕ್ತದಿಂದ ಬಂಧಿಸಲ್ಪಟ್ಟಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜ ಶಾಸ್ತ್ರ ವಿಭಾಗದ ಸಹಾಯಕ ಪ್ರೊಫೆಸರ್ ಡಾ.ಅನಿತಾ ರವಿಶಂಕರ್ ಗೆ ಲೋಕಾಯುಕ್ತ ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿದೆ.
ಪಿಹೆಚ್ಡಿ ವಿದ್ಯಾರ್ಥಿನಿ ಪ್ರೇಮ ಡಿ'ಸೋಜ ಎಂಬವರಿಂದ ಅವರ ಪ್ರಬಂಧ ಅಂಗೀಕಾರ ಆಗಬೇಕಾದರೆ ಮೈಸೂರಿನಿಂದ ಆಗಮಿಸುವ ಮೌಲ್ಯ ಮಾಪಕರ ಖರ್ಚು ಸೇರಿ ರೂ. 16,800 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. 2012ರ ಡಿಸೆಂಬರ್ 4 ರಂದು ಈ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು ರೂ. 5,000 ಮುಂಗಡ ಹಣ ಸ್ವೀಕರಿಸುತ್ತಿದ್ದಾಗಲೇ ಪ್ರೊಫೆಸರ್ ಅನಿತಾ ರವಿಶಂಕರ್ ಅವರನ್ನು ಮಂಗಳೂರು ಲೋಕಾಯುಕ್ತ ನಿರೀಕ್ಷಕರಾದ ಉಮೇಶ್ ಜಿ. ಶೇಟ್ ಮತ್ತು ಸಿಬ್ಬಂದಿ ಬಂಧಿಸಿದ್ದರು.
ಸದ್ರಿ ಆರೋಪಿ ಮೊದಲು ರೂ. 10,000, ನಂತರ ರೂ.4,000, ಮತ್ತು ಬಳಿಕ ರೂ. 16,800 ನೀಡುವಂತೆ ವಿದ್ಯಾರ್ಥಿನಿ ಬಳಿ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿತ್ತು. ಲೋಕಾಯುಕ್ತ ಸಂಸ್ಥೆಯ ಪರವಾಗಿ ಒಟ್ಟು 9 ಸಾಕ್ಷಿದಾರರನ್ನು ನ್ಯಾಯಾಲಯದಲ್ಲಿ ವಿಚಾರಣೆಗೆ ಒಳ ಪಡಿಸಲಾಗಿತ್ತು.
ವಿಚಾರಣೆ ನಡೆಸಿದ ಮಂಗಳೂರು ಲೋಕಾಯುಕ್ತ ವಿಶೇಷ ನ್ಯಾಯಾಲಯವು ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ಅವರ ವಾದವನ್ನು ಪುರಸ್ಕರಿಸಿ, ಆರೋಪ ಸಾಬೀತಾಗಿದೆ ಎಂದು ತೀರ್ಮಾನಕ್ಕೆ ಬಂದಿದ್ದು ಆರೋಪಿಗೆ ಶಿಕ್ಷೆ ವಿಧಿಸಿದೆ. ಮೂರನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹಾಗೂ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ. ಜಕಾತಿ ಅವರು ಶಿಕ್ಷೆ ಪ್ರಕಟಿಸಿದ್ದಾರೆ.
ಭ್ರಷ್ಟಾಚಾರ ನಿಗ್ರಹ ಕಾಯಿದೆಯ ಕಲಂ 7ರ ಅಡಿ ಯಲ್ಲಿ ಎಸಗಿದ ಅಪರಾಧಕ್ಕೆ ಆರೋಪಿಗೆ 2 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಕಲಂ 13 (1) (ಡಿ) ಯಲ್ಲಿ ಎಸಗಿದ ಅಪರಾಧಕ್ಕೆ 3 ವರ್ಷ ಸಾದಾ ಸಜೆ ಮತ್ತು ರೂ. 15,000/- ದಂಡ, ಆರೋಪಿ ದಂಡ ತೆರಲು ತಪ್ಪಿದಲ್ಲಿ ತಲಾ ಒಂದು ತಿಂಗಳ ಹೆಚ್ಚುವರಿ ಸಜೆ ಅನುಭವಿಸಬೇಕೆಂದು ನ್ಯಾಯಾಲಯ ಆದೇಶಿಸಿದೆ.
Mangalore university Professor takes Bribes to earn students pass PhD court sentences, Anitha Ravishankar, to a five-year jail term.
18-08-25 01:25 pm
Bangalore Correspondent
ಬೆಂಗಳೂರು ; ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ...
16-08-25 10:03 pm
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
18-08-25 01:28 pm
HK News Desk
ಉಪ ರಾಷ್ಟ್ರಪತಿ ಸ್ಥಾನಕ್ಕೆ ಎನ್.ಡಿ.ಎ ಕೂಟದಿಂದ ಅಚ್ಚ...
17-08-25 09:09 pm
ಜಮ್ಮು, ಕಾಶ್ಮೀರದಲ್ಲಿ ಮತ್ತೆ ಮೇಘ ಸ್ಫೋಟ, ಏಳು ಮಂದಿ...
17-08-25 03:02 pm
ಭಾರತಕ್ಕೆ ಮರಳಿದ ಗಗನಯಾತ್ರಿ ಶುಭಾಂಶು ಶುಕ್ಲಾ ; ದೆಹ...
17-08-25 12:54 pm
Dharmasthala, Dk Shivakumar, Pralhad Joshi: ಧ...
16-08-25 03:34 pm
17-08-25 11:06 pm
Mangalore Correspondent
Mangalore Rain, School Holiday: ಚಂಡಮಾರುತಕ್ಕೆ...
17-08-25 10:50 pm
Mangalore, Thokottu, Police: ತೊಕ್ಕೊಟ್ಟು ಮೊಸರು...
17-08-25 05:26 pm
Mangalore, Talapady Toll Plaza Fight: ಟೋಲ್ ತಪ...
17-08-25 04:13 pm
Landslide at Shiradi Ghat: ಭಾರೀ ಮಳೆಗೆ ಶಿರಾಡಿ...
16-08-25 11:11 pm
17-08-25 10:07 pm
Mangalore Correspondent
Mangalore Police, Drugs, Arrest: ಗಾಂಜಾ ಸೇವನೆ...
16-08-25 10:49 pm
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am