ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm