ಬ್ರೇಕಿಂಗ್ ನ್ಯೂಸ್
10-07-21 11:11 am Headline Karnataka News Network ಕ್ರೈಂ
ಮೈಸೂರು, ಜುಲೈ 10: ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.
ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
A mentally challenged woman has been allegedly raped in K R Hospital in Mysore.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 10:48 pm
HK News Desk
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm