ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.
ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm