ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm