ಬ್ರೇಕಿಂಗ್ ನ್ಯೂಸ್
13-07-21 12:30 pm Headline Karnataka News Network ಕ್ರೈಂ
ಇಟಾನಗರ, ಜು.13 : ಅರುಣಾಚಲ ಪ್ರದೇಶದ ಜೈಲಿನಲ್ಲಿ ಏಳು ಕೈದಿಗಳು ಅಲ್ಲಿನ ಕಾವಲು ಸಿಬಂದಿಗೆ ಮೆಣಸಿನಕಾಯಿ ಪುಡಿ ಎರಚಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ.
ರಾಜ್ಯದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಕೈದಿಗಳು ತಪ್ಪಿಸುವ ವೇಳೆ ಐದು ಮಂದಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಕೈದಿಗಳು ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ತಪ್ಪಿಸಿಕೊಂಡ ಕೈದಿಗಳನ್ನು ಅಭಿಜಿತ್ ಗೊಗೊಯ್, ತಾರೋ ಹಮಾಮ್, ಕಲೋಮ್ ಅಪಾಂಗ್, ತಾಲೂಮ್ ಪ್ಯಾನಿಂಗ್, ಸುಬಾಶ್ ಮೊಂಡಾಲ್, ರಾಜಾ ತೆಯೆಂಗ್, ಮತ್ತು ಡ್ಯಾನಿ ಗಮ್ಲಿನಾ ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಏಳು ಮಂದಿ ಕೈದಿಗಳು ಒಂದೇ ಸ್ಥಳದಲ್ಲಿ ಇದ್ದರು. ಊಟಕ್ಕೆ ಸೆಲ್ ತೆರೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಓಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
'ಜೈಲಿನಿಂದ ಪರಾರಿಯಾದವರ ಪತ್ತೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ರಿಸರ್ವ್ ಬೆಟಾಲಿಯನ್ ಪೊಲೀಸರು ಮತ್ತು ಸಿಬ್ಬಂದಿಗಳು ಪೂರ್ವ ಸಿಯಾಂಗ್ ಪಟ್ಟಣದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಎಲ್ಲಾ ನಿರ್ಗಮನ ಸ್ಥಳಗಳನ್ನು ಬಂದ್ ಮಾಡಲಾಗಿದೆ. ನಾವು ಶೀಘ್ರದಲ್ಲೇ ಕೈದಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Seven under-trials have managed to escape from an Arunachal Pradesh jail, attacking and injuring at least five security personnel in the process. The prison break was reported on Sunday from the state's East Siang district, sources have said.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm